ಸಾಲಬಾಧೆ ತಾಳಲಾರದೇ ಬಾವಿಗೆ ಹಾರಿ ರೈತ ಆತ್ಮಹತ್ಯೆ

Must Read

ಬೀದರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿಕೊಂಡು ತೀರಿಸಲಾಗದೆ ಮನನೊಂದು ಯುವ ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಬೂತಗಿ ಗ್ರಾಮದ ಸಂದೀಪ್ ರೆಡ್ಡಿ ತಂದೆ ಶಿವರಾಜ ಕಳಸಂಕಿ (38) ಎಂಬ ಯುವ ರೈತ ಜೀವ ಕಳೆದುಕೊಂಡಿದ್ದಾನೆ.

ಉಳುಮೆಗೆ ಅಂತ ಪಿಕೆಪಿಎಸ್ ಬ್ಯಾಂಕ್ ಹಾಗೂ ಖಾಸಗಿ ಸಾಲ ಮಾಡಿಕೊಂಡಿದ್ದರು. ಆದರೆ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ನಾಶವಾದ ಹಿನ್ನೆಲೆ ನೊಂದುಕೊಂಡಿದ್ದರು. ಈ ಮಧ್ಯೆ ಸಾಲಗಾರರ ಕಾಟದಿಂದ ಅವಮಾನ ತಾಳಲಾರದೇ ನೊಂದು ಶನಿವಾರ ಮಧ್ಯಾಹ್ನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ

ಸಿಂದಗಿ; ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಆದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯಗಳನ್ನು ನಡೆಸಿದೆ. ಮಹಾನ್ ವ್ಯಕ್ತಿಗಳ...

More Articles Like This

error: Content is protected !!
Join WhatsApp Group