Homeಸುದ್ದಿಗಳುಶನಿವಾರದಂದು  ಬೈಲಹೊಂಗಲಕ್ಕೆ ಕನ್ನಡ ಜ್ಯೋತಿ

ಶನಿವಾರದಂದು  ಬೈಲಹೊಂಗಲಕ್ಕೆ ಕನ್ನಡ ಜ್ಯೋತಿ

ಬೆಳಗಾವಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿ ಶನಿವಾರ ಬೈಲಹೊಂಗಲಕ್ಕೆ ಆಗಮಿಸಲಿದೆ.

ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ದಿನಾಂಕ 03.12.2022 ರಂದು ಮಧ್ಯಾಹ್ನ 3 ಗಂಟೆಗೆ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದು ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು, ಮಾಧ್ಯಮ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಇನ್ನಿತರ ಎಲ್ಲ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ಕನ್ನಡ ರಥವನ್ನು ಸ್ವಾಗತಿಸಲು ಎಲ್ಲರೂ ಪಟ್ಟಣದ ಚನ್ನಮ್ಮ ವೃತ್ತಕ್ಕೆ ಅಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಶ್ರೀಶೈಲ್ ಮೆಟಗುಡ್ ಹಾಗೂ ಬೈಲಹೊಂಗಲ ಕಸಾಪ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಮನವಿ ಮಾಡಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group