ಕಸಾಪ ಸಮ್ಮೇಳನ; ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ

Must Read

ಬಸವನಬಾಗೇವಾಡಿ: ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗುವ ಬಸವನಬಾಗೇವಾಡಿ ತಾಲೂಕಾ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ರಾಣಿ ಚೆನ್ನಮ್ಮ ವಿವಿ ಸಂಶೋಧನಾರ್ಥಿ ಬಸವರಾಜ ಹಡಪದ ಅವರ ಕವನ ಸಂಕಲನ “ಕಣ್ಣಿನಾಚೆಯ ಕಡಲು”ಕೃತಿ ಲೋಕಾರ್ಪಣೆಗೊಳ್ಳುತ್ತಿರುವುದು ಸಾಹಿತ್ಯ ವಲಯದಲ್ಲಿ ಸಂತಸ ತಂದಿದೆ.

ಅಂದು ಸಂಜೆ ೭.೩೦ ರ ಗ್ರಂಥ ಬಿಡುಗಡೆ ಸಮಾರಂಭದ ಸಾನ್ನಿಧ್ಯವನ್ನು ಹುಣಶ್ಯಾಳ ಪಿಬಿ ಗ್ರಾಮದ ಪೂಜ್ಯದ್ವಯರಾದ ಶಿವಪುತ್ರಪ್ಪ ಶರಣರು(ಸಿದ್ಧಾರೂಢ ಆಶ್ರಮ) ಮತ್ತು ಆನಂದ ದೇವರು(ಶಕ್ತಿಪೀಠ) ವಹಿಸುವರು.

ಉದ್ಘಾಟನೆಯನ್ನು  ಬಿ ಎಂ ಪಾಟೀಲ( ಜಿಲ್ಲಾಧ್ಯಕ್ಷರು ಕಸಾಪ ವಿಜಯಪುರ) ನೆರವೇರಿಸುವರು.

ಅಧ್ಯಕ್ಷತೆ ಸಿದ್ಧರಾಮ ಈ ಬಿರಾದಾರ (ಸಾಹಿತಿಗಳು,ಮನಗೂಳಿ), ಕೃತಿ ಪರಿಚಯ ಡಾ|| ಸುಜಾತಾ ಚಲವಾದಿ (ಅಧ್ಯಾಪಕರು, ಎಸ್ ಕೆ ಪದವಿ ಮಹಾವಿದ್ಯಾಲಯ, ತಾಳಿಕೋಟಿ) ನಡೆಸುವರು.

ಮುಖ್ಯ ಅತಿಥಿಗಳಾಗಿ ಲ. ರು ಗೊಳಸಂಗಿ (ಮಹಾಕವಿಗಳು, ಬಸವನಬಾಗೇವಾಡಿ), ವಿವೇಕಾನಂದ ಕಲ್ಯಾಣಶೆಟ್ಟಿ (ಮಾ ಅಧ್ಯಕ್ಷರು ಕಸಾಪ ಬಸವನಬಾಗೇವಾಡಿ), ಶಾಂತು ಬೈಚಬಾಳ(ಮಾ ಗ್ರಾ ಪಂ ಅಧ್ಯಕ್ಷರು,ಮಸಬಿನಾಳ), ಶ್ರೀಮತಿ ಲಕ್ಷ್ಮೀ0ಬಾಯಿ ಸಿ ಖೇಡದ(ನಾಗವಾಡ) ಇವರು ಆಗಮಿಸುವರೆಂದು ಪ್ರಕಟಣೆಯಲ್ಲಿ ತಿಳಿದುಬಂದಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group