ಮಡಗಾಂವ ಬಸ್ ಪುನರಾರಂಭಿಸಲು ಮನವಿ

Must Read

ಗೋಕಾಕ: ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬಿಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡ ಸತ್ತೆಪ್ಪ ಕರೆವಾಡಿ ಅವರ ನೇತೃತ್ವದಲ್ಲಿ ಬುಧವಾರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ಈ ಹಿಂದೆ ಮಡಗಾಂವ ಹೋಗಲು ಬಸ್ ವ್ಯವಸ್ಥೆ ಇತ್ತು, ಆದರೆ ಕೆಲ ವರ್ಷಗಳಿಂದ ಬಂದ್ ಮಾಡಿರುವ ಕಾರಣದಿಂದ ಇಲ್ಲಿಂದ ಅಲ್ಲಿಗೆ ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು ಕೂಡಲೇ ಬಸ್ ಆರಂಭಿಸುವ ಕಾರ್ಯವನ್ನು ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿಎಸ್‍ಎಸ್‍ನ ಮುಖಂಡರಾದ ಕಾಡಪ್ಪ ಮೇಸ್ತ್ರಿ, ರವಿ ಕಡಕೋಳ, ಲೋಕೇಶ ಕರೆವಾಡಿ, ರಮೇಶ ಮಾದರ ಇದ್ದರು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group