ಜೀವ ಕಾರುಣ್ಯದ ಮಿಡಿತ ಕವನ ಸಂಕಲನ ಬಿಡುಗಡೆ

Must Read

ಬೈಲಹೊಂಗಲ: ಸಹೃದಯ ಸಾಹಿತ್ಯ ಪ್ರತಿಷ್ಠಾನದಿಂದ ಉಪನ್ಯಾಸಕ, ಕವಿ ಶ್ರೀಶೈಲ ಚ. ಹೆಬ್ಬಳ್ಳಿ ಅವರ ‘ಜೀವ ಕಾರುಣ್ಯದ ಮಿಡಿತ’ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ ಜನೇವರಿ ೨೬ ರಂದು ಮಧ್ಯಾಹ್ನ ೨ ಗಂಟೆಗೆ ಗಣಾಚಾರಿ ಶಿಕ್ಷಣ ಸಂಸ್ಥೆಯ ಅಕ್ಕಮಹಾದೇವಿ ಮಹಿಳಾ ಪದವಿ ಮಹಾ ವಿದ್ಯಾಲಯದಲ್ಲಿ ಜರುಗಲಿದೆ.

ಸವದತ್ತಿ ಕಸಾಪ ಘಟಕದ ಅಧ್ಯಕ್ಷರಾದ ಡಾ. ವಾಯ್. ಎಮ್. ಯಾಕೊಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಗಣಾಚಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸಿ. ಬಿ. ಗಣಾಚಾರಿ ಉದ್ಘಾಟನೆ ಮಾಡಲಿದ್ದಾರೆ.

ಸವದತ್ತಿಯ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಕೃತಿ ಬಿಡುಗಡೆಗೊಳಿಸಲಿದ್ದು, ಕೃತಿ ಪರಿಚಯವನ್ನು ಬೈಲಹೊಂಗಲ ಕಸಾಪ ಘಟಕದ ಅಧ್ಯಕ್ಷರಾದ ಎನ್. ಆರ್. ಟಕ್ಕಾಯಿ ಮಾಡಿಕೊಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ. ಎಫ್. ಡಿ. ಗಡ್ಡಿಗೌಡರ ಹಾಗೂ ಕವಿ ಶಿವಾನಂದ ಉಳ್ಳಿಗೇರಿ ಆಗಮಿಸುವರೆಂದು ಸಹೃದಯ ಸಾಹಿತ್ಯ ಪ್ರತಿಷ್ಠಾನದ ಉಪಾಧ್ಯಕ್ಷ ಬಸವರಾಜ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group