ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಗೋಮಾತೆಗೆ ಒಣ ಹುಲ್ಲು ಸಮರ್ಪಣೆ

Must Read

ಜನವರಿ: ಹೊಸಗುಂದದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿರುವ ಶ್ರೀ ಭಾರತೀತೀರ್ಥ ಗೋಶಾಲೆಗೆ ಬೇಕಾಗಿರುವ ಒಣ ಹುಲ್ಲನ್ನು ಸೇವೆಯಾಗಿ ಸಾಗರ ತಾಲೂಕು ಹೊಸಗುಂದ ಗ್ರಾಮದ ಸುತ್ತ ಮುತ್ತಲಿನ ಭಕ್ತರು ನೀಡಿದ್ದ ಒಣ ಹುಲ್ಲನ್ನು ಮಧ್ಯಾಹ್ನ 12 -00 ಗಂಟೆಗೆ ಸರಿಯಾಗಿ ಗೋಪೂಜೆ ಹಾಗು ಗೋಮಾತೆಗೆ ಸಮರ್ಪಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .

ರಾಜ್ಯದ ಬೆಂಗಳೂರು , ಹಾಸನ , ಮೈಸೂರು , ಹುಬ್ಬಳ್ಳಿ , ಧಾರವಾಡ , ಶಿವಮೊಗ್ಗ , ಶಿಕಾರಿಪುರ ಹಾಗು ಇನ್ನಿತರೇ ಪ್ರದೇಶಗಳಿಂದ ಆನ್ ಲೈನ್ ಮೂಲಕ ಹಣ ಸಂದಾಯ ಮಾಡಿ ಶ್ರೀ ಭಾರತೀತೀರ್ಥ ಗೋಶಾಲೆಗೆ ಬೇಕಾಗಿರುವ ಒಣ ಹುಲ್ಲನ್ನು ತೆಗೆದುಕೊಳ್ಳಲು ಸೇವೆಯಾಗಿ ನೀಡಿದ್ದಾರೆ ಹಾಗು ಸಾಗರ ತಾಲ್ಲೂಕು ಹೊಸಗುಂದ ಗ್ರಾಮದ ಸುತ್ತ ಮುತ್ತಲಿನ ಮೂನ್ನೂರಕ್ಕೂ ಹೆಚ್ಚು ಭಕ್ತರು ಹಾಗು ಶಿಕಾರಿಪುರದ ಭಕ್ತರು ಒಣ ಹುಲ್ಲನ್ನು ಸೇವೆಯಾಗಿ ನೀಡಿದ್ದಾರೆ ಎಂದು ದೇವಾಲಯದ ಧರ್ಮದರ್ಶಿಗಳಾದ ಸಿ.ಎಂ. ನಾರಾಯಣ ಶಾಸ್ತ್ರಿ ನುಡಿದರು.

ದೇವಾಲಯದ ಪ್ರಧಾನ ಅರ್ಚಕರಾದ ಸುಬ್ರಮಣ್ಯ ಭಟ್ ಅವರು ಶ್ರೀ ಉಮಾಮಹೇಶ್ವರ ನ ಸನ್ನಿಧಾನದಲ್ಲಿ ಆನ್ ಲೈನ್ ಮೂಲಕ ಹಣ ಸಂದಾಯ ಮಾಡಿ ಒಣ ಹುಲ್ಲನ್ನು ಸೇವೆಯಾಗಿ ಹುಲ್ಲಿನ ರೂಪದಲ್ಲಿ ಗೋಶಾಲೆಯಲ್ಲಿ ಇರುವ ಗೋಮಾತೆಗೆ ನೀಡಿರುವ ಭಕ್ತರ ಕುರಿತು ವಿಶೇಷವಾದ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿರುವ ಶ್ರೀ ಭಾರತೀತೀರ್ಥ ಗೋಶಾಲೆ ಯಲ್ಲಿ ಇರುವ ಶಿವದಾಸ ಹಾಗು ಗೋವುಗಳಿಗೆ ಒಣ ಹುಲ್ಲನ್ನು ದೇವಾಲಯದ ಧರ್ಮ ದರ್ಶಿಗಳಾದ ಸಿ.ಎಂ. ನಾರಾಯಣ ಶಾಸ್ತ್ರೀ ಹಾಗು ದೇವಾಲಯಕ್ಕೆ ಬಂದಿದ್ದ ಸುತ್ತಮುತ್ತಲಿನ ಭಕ್ತರು ಸಮರ್ಪಣೆ ಮಾಡಿದರು ನಂತರ ದೇವಾಲಯದಲ್ಲಿ ಗೋಪೂಜೆಗೆ ಬಂದಿದ್ದ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ಶ್ರೀ ಉಮಾ ಮಹೇಶ್ವರ ದೇವಾಲಯದ ಅರ್ಚಕರಾದ ವಿಜಯ್ ವಿಠಲ ಹೆಬ್ಬಾರ್ , ಉಮಾಮಹೇಶ್ವರ ಹೆಗಡೆ ಹಾಗು ಗ್ರಾಮದ ಹಾಗು ಸುತ್ತಮುತ್ತಲಿನ ಐಗಿನ ಬೈಲು ದಿನೇಶ್ , ಗಣಪತಿ ಶೆಟ್ಟಿ , ಕೆ.ಟಿ. ರಮೇಶ್ , ಶ್ರೀಧರ ಜೋಯಿಸ್ , ಶ್ರೀ ರಕ್ಷಾ ಹಾಗು ಇನ್ನೂ ಅನೇಕ ಭಕ್ತರು ಉಪಸ್ಥಿತರಿದ್ದರು.


ಚಿತ್ರ: ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...

More Articles Like This

error: Content is protected !!
Join WhatsApp Group