ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2022-23 ನೆಯ ಸಾಲಿನ ಕ್ರೀಡಾ ಹಬ್ಬ ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಕ್ರೀಡೆಗಳು ಬದುಕಿನ ಉತ್ಸಾಹವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯ ಕಾಪಾಡಲು ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.
ಮನರಂಜನೆಯ ಜೊತೆಗೆ ಶಿಸ್ತು, ಸಂಯಮದ ಗುಣಗಳನ್ನು ಬೆಳೆಸಿ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡೆಗಳ ಪಾತ್ರ ಹಿರಿದು ಎಂದು ಅವರು ಹೇಳಿದರು. ವಿದ್ಯಾರ್ಥಿನಿ ಪೃಥ್ವಿ ಗರಗದ ಪ್ರಾಸ್ತಾವಿಕವಾಗಿ ಮಾತನಾಡಿ ಕ್ರೀಡೆಯ ಮಹತ್ವವನ್ನು ತಿಳಿಸಿಕೊಟ್ಟಳು.
ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅಭಿಷೇಕ ಗರಗದ, ಶಹೀದ ಕಿತ್ತೂರ, ಬಸವರಾಜ ಹೊಸೂರ, ಗುರುದೇವ ನಂದಿಹಳ್ಳಿ, ಈರಣ್ಣ ಅಳಗೋಡಿ ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಕ್ಕಳ ವೈಯಕ್ತಿಕ ಹಾಗೂ ಗುಂಪು ಆಟಗಳು ಜರುಗಿದವು.
ಶಿಕ್ಷಕರಾದ ಜೆ.ಆರ್. ನರಿ, ಎಸ್.ಬಿ. ಭಜಂತ್ರಿ, ಆರ್.ಸಿ. ಸೊರಟೂರ, ಎಸ್.ಟಿ.ಚೌಗಲಾ, ಎಸ್.ವಿ. ಬಳಿಗಾರ, ವಿ.ಬಿ. ಪಾಟೀಲ, ಕ್ರೀಡಾ ಮಂತ್ರಿ ಅಭಿಲಾಷ ಹೊಂಗಲ ಉಪಸ್ಥಿತರಿದ್ದರು. ಐಶ್ವರ್ಯ ಕುಲಕರ್ಣಿ ನಿರೂಪಿಸಿದರು. ರಾಜೇಶ್ವರಿ ಸೊಗಲದ ಸ್ವಾಗತಿಸಿದರು. ಸಾವಿತ್ರಿ ಹೊಂಗಲ ವಂದಿಸಿದರು.