ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ – ಚಂದ್ರ ಸಿಂಗ್ ಆರೋಪ

Must Read

ಬೀದರ: ರಾಜಕೀಯ ಹಿನ್ನೆಲೆಯೇ ಇರದ ಅಶೋಕ ಖೇಣಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟನ್ನು  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಅಳಿಯ ಚಂದ್ರ ಸಿಂಗ್ ಆರೋಪಿಸಿದ್ದಾರೆ

ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಅಶೋಕ ಖೇಣಿ ಮತ್ತು ಡಿ ಕೆ ಶಿವಕುಮಾರ್ ಬಿಸಿನೆಸ್ ಪಾಲುದಾರರಾಗಿದ್ದಾರೆ. ಅಶೋಕ ಖೇಣಿ ಗೆ ಸರಿಯಾಗಿ ಮಾತಾಡಲು ಬರೋದಿಲ್ಲ. ಕ್ಷೇತ್ರದಲ್ಲಿ ಅವರನ್ನು ಯಾರೂ ಗುರುತು ಕೂಡ ಹಿಡಿಯುವುದಿಲ್ಲ ಅಂಥವರಿಗೆ ಟಿಕೆಟ್ ಕೊಟ್ಟು ಕಾಂಗ್ರೆಸ್ ಪಕ್ಷ ಕೇವಲ ದುಡ್ಡು ಇದ್ದವರಿಗೆ ಮಾತ್ರ ಟಿಕೆಟ್ ನೀಡುವುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಖೇಣಿಯವರಿಗೆ ಟಿಕೆಟ್ ಕೊಡುವಲ್ಲಿ ಜಿಲ್ಲೆಯಿಂದ ಹಿಡಿದು ರಾಜ್ಯದವರೆಗೂ ನಾಯಕರ ಪಿತೂರಿ ಇದೆ ಎಂದು ಆರೋಪಿಸಿದ ಅವರು, ತಮಗೆ ಟಿಕೆಟ್ ಕೊಡದೆ ಇದ್ದರೆ ತಾವು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group