ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Must Read

ಬೀದರ: ಸಹಕಾರಿ ಸಂಘ ಅಲ್ಲದೆ ಖಾಸಗಿಯವರ ಕಡೆ ಮಾಡಿದ ಸಾಲ ತೀರಿಸಲಾಗದೆ ಮನನೊಂದು ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿಯಲ್ಲಿ ನಡೆದಿದೆ.

ಸಂಗಪ್ಪ ಮಳಚಾಪೂರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾದ ರೈತ ಎನ್ನಲಾಗಿದೆ.

ಅಧಿಕಾರಿಗಳು, ರಾಜಕಾರಣಿಗಳು ವಿಧಾನ ಸಭಾ ಚುನಾವಣೆಯಲ್ಲಿ ಫುಲ್ ಬಿಜಿಯಾಗಿದ್ದು ರೈತನ ಬವಣೆಯನ್ನು ಯಾರೂ ಆಲಿಸಲಿಲ್ಲ ಎನ್ನಲಾಗಿದ್ದು ಮನನೊಂದ ರೈತ ನೇಣಿಗೆ ಶರಣಾಗಿದ್ದಾನೆ ಅಲ್ಲದೆ ಅಕಾಲಿಕ ಮಳೆ ಬಿದ್ದು ರೈತನ ಜೋಳ, ಉಳ್ಳಾಗಡ್ಡಿ ಬೆಳೆ ಹಾಳಾಗಿತ್ತು. ವಿವಿಧೆಡೆ ಖಾಸಗಿ ಸಾಲ ಮಾಡಿಕೊಂಡಿದ್ದ ಸಂಗಪ್ಪ ಮಳಚಾಪೂರೆ ಸಾಲಗಾರರ ಕಾಟದಿಂದ ಬೇಸತ್ತು ಹೋಗಿದ್ದ ಎನ್ನಲಾಗಿದೆ.

ಸಹಕಾರ ಸಂಸ್ಥೆ ಸೇರಿ ವಿವಿದ ಕಡೆ ಸಾಲ ಮಾಡಿಕೊಂಡಿದ್ದ.

ಈ ಮಧ್ಯೆ ತಹಶೀಲ್ದಾರರ ಅನುಪಸ್ಥಿತಿಯಲ್ಲಿ  ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದರಿಂದ ಅಧಿಕಾರಿಗಳ ವಿರುದ್ಧ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಭಾಲ್ಕಿ ತಾಲ್ಲೂಕಿನ ದನ್ನೂರ ಪೋಲಿಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group