ನಾನು ಟಿಕೆಟ್ ಮಾರಿಕೊಂಡಿಲ್ಲ – ಅಶೋಕ ಖೇಣಿ

Must Read

ಬೀದರ: ಅಶೋಕ್ ಖೇಣಿಗೆ ಕಾಂಗ್ರೆಸ್ ಟಿಕೆಟ್‌ ಮಾರಿಕೊಂಡಿದೆ ಎಂಬ ಚಂದ್ರಾಸಿಂಗ್ ಆರೋಪ ವಿಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಶೋಕ ಖೇಣಿ, ಟಿಕೆಟ್ ಮಾರಿಕೊಂಡ ವಿಡಿಯೋ ಇದ್ರೆ ನಾನು ತಲೆಬೋಳಿಸಿಕೊಂಡು ರಾಜೀನಾಮೆ ನೀಡುತ್ತೇನೆ ಎಂದರು.

ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಡನೆ ಮಾತನಾಡಿದ ಅವರು, ನನ್ನ ಟಿಕೆಟ್ ಖರೀದಿ ಮಾಡೋ ನೇಚರ್ ಇದೆಯಾ ಎಂದು ಪ್ರಶ್ನೆ ಮಾಡಿದರು.

ನನಗೆ ಟಿಕೆಟ್ ಸಿಕಿದ್ದಕ್ಕೆ ಚಂದ್ರಾಸಿಂಗ್ ಅಪ್ ಸೆಟ್ಟಾಗಿದ್ದಾರೆ.ಅವರ ಜೊತೆ ಮಾತನಾಡಿ ಸಮಾಧಾನ ಮಾಡುತ್ತೇನೆ. ಅವರು ಯುವಕರಿದ್ದು ಅವರಿಗೆ ಭವಿಷ್ಯವಿದೆ. ಬೀದರ ಅನ್ನು ಸಿಂಗಾಪೂರ ಮಾಡುತ್ತೇನೆ ಅಂತ ನಾನು ಯಾರಿಗೆ ಹೇಳಿದ್ದೆನೆ‌ ಅವರನ್ನು  ತೋರಿಸಿ ನಾನು ಒಂದು ಕೋಟಿ ಕೋಡುತ್ತೇನೆ. ಸುಮ್ಮನೆ ಸುಳ್ಳು ಹೇಳುವುದನ್ನು ಬಿಟ್ಟು ಬಿಡಿ ಎಂದ ಅವರು, ಕೆಲವರು ಟಿಆರ್ ಪಿಗಾಗಿ ಈ ರೀತಿ ಮಾಡುತ್ತಾರೆ, ಇದು ತಪ್ಪು ಎಂದು ಮಾಧ್ಯಮಗಳ ವಿರುದ್ದ ಗರಂ ಆದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group