Homeಸುದ್ದಿಗಳುರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಮತ್ತು ಬಸವ ಜಯಂತಿ ಆಚರಣೆ

ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಮತ್ತು ಬಸವ ಜಯಂತಿ ಆಚರಣೆ

ಬೆಂಗಳೂರು: ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ವತಿಯಿಂದ ವಿಶ್ವ ಪುಸ್ತಕ ಹಾಗೂ ಕೃತಿಸಾಮ್ಯ ದಿನಾಚರಣೆ ಮತ್ತು ಬಸವ ಜಯಂತಿ ಕಾರ್ಯಕ್ರಮ ವನ್ನು ದಿ. 23 ರಂದು ಹಮ್ಮಿಕೊಳ್ಳಲಾಗಿತ್ತು.

ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಾಗೂ ವಿಶ್ವ ಪುಸ್ತಕ ದಿನಾಚಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು

ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರು ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು ಹಾಗೂ ವಿಲಿಯಮ್ ಶೆಕ್ಸ್ ಪಿಯರ್ ಹಾಗೂ ಬಸವಜಯಂತಿ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸರೋಜಮ್ಮ ಎಂ. ಉಪ ನಿರ್ದೇಶಕರು ರಾಜ್ಯ ಕೇಂದ್ರ ಗ್ರಂಥಾಲಯ ಹಾಗೂ ಶ್ರೀಮತಿ ಅನಿತಾ ಮುಖ್ಯ ಗ್ರಂಥಾಲಯ ಅಧಿಕಾರಿ, ಅಣ್ಣಾ ರಾವ್, ಶ್ರೀಮತಿ ಶೈಲಜಾ, ಶ್ರೀಮತಿ ಮಮತಾ ಹಾಗೂ ಸಿಬ್ಬಂದಿ ವರ್ಗದವರು , ಸಾರ್ವಜನಿಕ ಓದುಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

RELATED ARTICLES

Most Popular

error: Content is protected !!
Join WhatsApp Group