ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣಾ ಕಾರ್ಯಾಗಾರ

Must Read

ಬೆಳಗಾವಿ – ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ  ಕಾರ್ಯ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿ. ೧೩ ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಎ. ಎಸ್. ಬಣಗಾರ ಕಾರ್ಯನಿರ್ವಾಹಕ ಅಭಿಯಂತರು ಚಿಕ್ಕೋಡಿ  ವಹಿಸಿಕೊಂಡು ಕಾರ್ಯಾಗಾರವನ್ನು ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚಿಕ್ಕೋಡಿ ವಿಭಾಗದ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಬಗ್ಗೆ ತಿಳಿದುಕೊಂಡು ಅದನ್ನು ತಮ್ಮ ಗ್ರಾಮ ಪಂಚಾಯತಿಯಲ್ಲಿ ಒಳ್ಳೆಯ ರೀತಿ ಕಾರ್ಯಾಚರಣೆ ಮಾಡಿಕೊಂಡು ಹೋಗುವಲ್ಲಿ ನಿಮ್ಮ ಪಾತ್ರ ತುಂಬಾ ಮುಖ್ಯವಾಗಿರುತ್ತದೆ ಎಂದು ಅಧ್ಯಕ್ಷತೆಯ ಪ್ರಾಸ್ತಾವಿಕ ಮಾತನಾಡಿದರು.

ಈ ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿಲ್ಸನ್ ಧನರಾಜ ಬೆಂಗಳೂರು ಇವರು ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಚರಣೆ ನಿರ್ವಹಣೆ ಕುರಿತು ಸಂಪೂರ್ಣವಾಗಿ ಪ್ರಾಯೋಗಿಕವಾಗಿ ಮಾಹಿತಿಯನ್ನು ತಿಳಿಸಿದರು. ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ದೀಪಕ.ಕೆ. ಅವರು ಮಾತನಾಡಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ನೀರುಘಂಟಿಗಳು ಅವರು ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿದರು.

ತರಬೇತಿ ಕಾರ್ಯಕ್ರಮಕ್ಕೆ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಚಿಕ್ಕೋಡಿ ತಾಲೂಕಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಿಂದ ಒಬ್ಬರು ನೀರು ಘಂಟಿ ಗಳು ಮತ್ತು ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಂಡದ ನಾಯಕರು ಮತ್ತು ಸಮುದಾಯ ಸಂಘಟಕರು   ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group