ಭಾರತೀಯರ ಹಬ್ಬ

Must Read

ಭಾರತೀಯರ ಹಬ್ಬ

ಮರೆಯದಿರಿ ಭಾರತದ, ಪ್ರಜೆಗಳೇ

ಸ್ವಾತಂತ್ರ್ಯವ, ತಂದಕೊಟ್ಟವರ ಕಹಳೆ

ತ್ಯಾಗ ಬಲಿದಾನದ ವೀರರವರು

ಅಮರರಾಗಿ ಕೈಗಿತ್ತರು ದೇಶದ ತೇರು

ವ್ಯರ್ಥವಾಗದಿರಲಿ, ವೀರರ ಹನಿಹನಿ ರಕ್ತ

ಸಂಕೋಲೆಯಿಂದ ನಮ್ಮ, ದೇಶವಾದ ಮುಕ್ತ

ಸ್ವಾತಂತ್ರ್ಯಕೆ ಹೋರಾಡಿದ ದೇಶ ಭಕ್ತರವರು 

‌ಅವರ ದಿಟ್ಟ ಹೆಜ್ಜೆಯೇ ನಮಗಾದ ಉಸಿರು

ಶಾಂತಿ ಅಹಿಂಸೆಯವ ಅವರೇರಿದ ಮೆಟ್ಟಿಲು

ಈ ದಿನತೂಗುತಿವೆ, ಭಾರತದ ಮನೆತೊಟ್ಟಿಲು

೧೫ ಅಗಷ್ಟ ನಮ್ಮೆಲ್ಲರ, ಹರ್ಷತುಂಬಿದ ಹಬ್ಬ

ಭಾರತೀಯರ ಸಹನೆಗೆ ಬ್ರಿಟಿಷರಾದರು ಸ್ತಬ್ಧ 

ಅಖಂಡ ಭಾರತಕೆ ಪಣತೊಟ್ಟ ವೀssರ

ನಮ್ಮ ವಲ್ಲಭಭಾಯ್ ಪಟೇಲ ಧೀsರss

ಉಕ್ಕಿನಂತೆ ಎದೆ ತಟ್ಟಿನಿಂತ ಹೋರಾಟಗಾರ

ಹಲವು ಸಾಮ್ರಾಜ್ಯಗಳ ಮಣಿಸಿದ ಸರ್ದಾರ

ಬುದ್ಧ ಬಸವ ಅಂಬೇಡ್ಕರ್ ಜನಿಸಿದ ಮಣ್ಣಿದು

ವೀರಾಧಿವೀರರಾಳಿ ಮೆರೆದ ಭೂಮಿ ನಮ್ಮದು

ವಿವಿಧತೆಯಲ್ಲಿ ಏಕತೆಯ ಮೆರೆದ ಅಭಿಮತವು

ದೇಶಬಾಂಧವರ ಹೋರಾಟದ ವಿಜಯ ಭಾರತವು


ಶ್ರೀಮತಿ ಸುಲೋಚನಾ ಮಾಲಿಪಾಟೀಲ.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group