ಸಚಿವ ಶಿವಾನಂದ ಪಾಟೀಲ ಕ್ಷಮೆ ಕೇಳಬೇಕು

Must Read

ಸಿಂದಗಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಎಂದು ಕರವೇ ಉ.ಕ ಸಂಚಾಲಕ ಸತೀಶಕುಮಾರ ಕೌಲಗಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಾಧ್ಯಮ ಮುಂದೆ ಮಾತನಾಡಿ, ಜವಳಿ ಸಚಿವ ಶಿವಾನಂದ ಪಾಟೀಲ ರೈತರು ಯಾವ ರೀತಿ ಸತ್ತರೂ ಅದನ್ನು ಆತ್ಮಹತ್ಯೆ ಎಂದು ಪರಿಗಣಿಸಿ ಪರಿಹಾರಕ್ಕೆ ಸಂಬಂಧಿಕರು ಆಸೆ ಪಡುತ್ತಾರೆ ಎಂಬ ಹೇಳಿಕೆ ಇಡೀ ರಾಜ್ಯದ ರೈತರನ್ನು ಅವಮಾನಿಸಿದಂತಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತು ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group