spot_img
spot_img

ಕ್ರಿಯೇಟಿವ್ ಕಿಡ್ಸ್ ಹೋಮ್ ನಲ್ಲಿ ಕೃಷ್ಣ ಜನ್ಮಾಷ್ಟಮಿ

Must Read

- Advertisement -

ಸಿಂದಗಿ: ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್‍ನಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಚಿಣ್ಣರು ಕೃಷ್ಣ ಮತ್ತು ರಾಧೆಯ ವೇಷ ಧರಿಸಿ ಸಂಭ್ರಮಿಸಿದರು. ಶ್ರೀ ಕೃಷ್ಣ ವೇಷಧಾರಿ ಮಕ್ಕಳು ಮೊಸರು ಮಡಿಕೆ ಒಡೆದು ಸಂಭ್ರಮಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರತ್ನಾ ಅಶೋಕ ಮನಗೂಳಿ ಮಾತನಾಡಿ, ಚಿಣ್ಣರು ಕೃಷ್ಣ ಮತ್ತು ರಾಧೆಯ ವೇಷ ಧರಿಸಿ ಸಂಭ್ರಮಿಸಿದ್ದು ನನಗೆ ಸಂತಸ ತಂದಿದೆ. ನಮಗೆ ಬಾಲ್ಯದಲ್ಲಿ ಇಂಥ ಅವಕಾಶಗಳು ಸಿಕ್ಕಿರಲಿಲ್ಲ. ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್‍ನಲ್ಲಿ ಚಿಣ್ಣರು ಕೃಷ್ಣ ಮತ್ತು ರಾಧೆಯ ವೇಷ ಧರಿಸಿ ಸಂಭ್ರಮಿಸಲು ಸೂಕ್ತ ವೇದಿಕೆ ನೀಡಿದ್ದಾರೆ ಎಂದು ಹೇಳಿದರು. 

- Advertisement -

90 ಕ್ಕೂ ಹೆಚ್ಚು ಮಕ್ಕಳು ಶ್ರೀ ಕಷ್ಣ ಹಾಗೂ ರಾಧೆಯರ ವೇಷ ಧರಿಸಿ, ಸಂಭ್ರಮಿಸಿದರು. ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಕಾರ್ಯದರ್ಶಿ ಮತ್ತು ಮುಖ್ಯಗುರುಮಾತೆ ಡಾ.ಜ್ಯೋತಿ ಪೂಜಾರ, ಲಕ್ಷ್ಮಿಬಾಯಿ ಪೂಜಾರ, ರುಕ್ಮಿಣಿ ಪೂಜಾರಿ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಲಾ ಬಮ್ಮಣ್ಣಿ, ಶಾಂತಾ ಮೊಸಲಗಿ, ಸಾಧನಾ ಈಮಡೆ, ಗೌರಿ ಪಾಟೀಲ, ಅಂಬಿಕಾ ಹೂಗಾರ ಹಾಗೂ ಸಿಬ್ಬಂಧಿಗಳು, ಪಾಲಕರು ಹಾಜರಿದ್ದರು.

- Advertisement -
- Advertisement -

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -

More Articles Like This

- Advertisement -
close
error: Content is protected !!
Join WhatsApp Group