ಘಟಪ್ರಭಾ: ಸಮಾಜದ ಕಟ್ಟ ಕಡೆ ವ್ಯಕ್ತಿಗೆ ಸಾಲ ನೀಡುವ ಮೂಲಕ ಆರ್ಥಿಕವಾಗಿ ಸದೃಢವಾಗಿ ಬೆಳೆದು ಆ ವ್ಯಕ್ತಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿ ಸಂಸ್ಥೆಗಳು ಮುಂದೆ ಬರಬೇಕೆಂದು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ಗೋಕಾಕ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ. ಇದರ 25 ನೇ ವರ್ಷದ ಬೆಳ್ಳಿ ಮಹೋತ್ಸವ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿದ ಅವರು ನಂದಗಾವ ಗ್ರಾಮ ಸೇರಿದಂತೆ ನಾಲ್ಕು ಗ್ರಾಮಗಳ ಸಂಸ್ಥೆಯ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಕಡಿಮೆ ದರದಲ್ಲಿ ಸಾಲ ನೀಡಬೇಕೆಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾದ್ದ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಮಾತನಾಡಿ, ಸಹಕಾರಿ ಕ್ಷೇತ್ರ ಜನರ ಜೀವನ ಸಮೃದ್ಧಿಗೊಳಿಸುವ ಶಕ್ತಿಯಾಗಿದೆ. ಸಹಕಾರಿ ಕ್ಷೇತ್ರವು 1905 ರಲ್ಲಿ ಪ್ರಾರಂಭವಾಗಿದ್ದು ದೇಶದಲ್ಲಿ ಸಹಕಾರಿ ಕ್ಷೇತ್ರವು ಬೆಳೆಯಲು ಕರ್ನಾಟಕವು ಭದ್ರಬುನಾದಿಯಾಗಿದ್ದು, ರಾಜ್ಯದ ಸಣ್ಣರಾಮನಗೌಡ ಸಿದ್ದನಗೌಡ ಪಾಟೀಲ ಸಹಕಾರ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ ಅವರ ಸ್ಮರಣೆ ಮುಖ್ಯ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಹಕಾರ ವಲಯಕ್ಕೆ ಸೂಕ್ತ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪಿಸಿದೆ ಎಂದರಲ್ಲದೇ ದೇಶದಲ್ಲಿ ಸಹಕಾರಿ ಕ್ಷೇತ್ರ ಬೆಳೆಯಲು ವಿಶ್ವ ವಿದ್ಯಾಲಯ ಸ್ಥಾಪಿಸಿದ್ದಾರೆ ಸಹಕಾರಿ ಕ್ಷೇತ್ರ ಬೆಳೆದರೆ ರೈತರಿಗೆ ಸಾಕಷ್ಠು ಅನುಕೂಲವಾಗಲಿದೆ ಎಂದರು.
ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಅವರನ್ನು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸನ್ಮಾನಿಸಿದರು. ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕ ಮಹನೀಯರನ್ನು ಸನ್ಮಾನಿಸಿದರು.
ಸಾನ್ನಿಧ್ಯ ವಹಿಸಿದ್ದ ಸಾವಳಗಿ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪೂಜ್ಯ ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಗಳು ಆಶೀವರ್ಚನ ನೀಡಿ ಮಾತನಾಡಿದ ಅವರು ಸಹಕಾರಿ ಇನ್ನಷ್ಟು ಹೆಮ್ಮರವಾಗಿ ಬೆಳೆಯಲ್ಲಿ ರೈತರು,ಬಡವರು, ಕೂಲಿಕಾರ್ಮಿಕರು ಇದರ ಉಪಯೋಗ ಪಡೆದು ಆರ್ಥಿಕವಾಗಿ ಮುಂದೆ ಬರಬೇಕೆಂದರು.
ಜೆಜಿಕೊ ಸಹಕಾರ ಸಂಸ್ಥೆ ಅಧ್ಯಕ್ಷ ಅಪ್ಪಯ್ಯಪ್ಪ ಬಡಕುಂದ್ರಿ, ಕೆ ಎಲ್ ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸೈದಪ್ಪ ಗದಾಡಿ, ಡಾ.ಮಹಾಂತೇಶ ಕಡಾಡಿ, ಬಸವರಾಜ ಸುಲ್ತಾನಪೂರ, ಗ್ರಾಮ ಪಂಚಾಯತ ಅಧ್ಯಕ್ಷ ಧರೆಪ್ಪ ಮಗದುಮ್ಮ, ನಿಜಲಿಂಗಯ್ಯ ಮಠದ, ಸಂಸ್ಥೆ ಅಧ್ಯಕ್ಷ ಡಾ.ವಸಂತ ಮಗದುಮ್ಮ, ನಾಗಪ್ಪ ಶಿರಗಾಂವಿ, ಮಹೇಶ ಮಗದುಮ್ಮ, ಕೆಂಪಣ್ಣ ಮಗದುಮ್ಮ ಸೇರಿದಂತೆ ಅನೇಕರು ಇದ್ದರು.
ಶ್ರೀಕಾಂತ ಅಮ್ಮಣಗಿ ಸ್ವಾಗತಿಸಿದರು, ರಾಮಚಂದ್ರ ಕಾಕಡೆ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಕಾರ್ಯನಿರ್ವಾಹಕ ದುಂಡಪ್ಪ ಮಗದುಮ್ಮ ವರದಿ ವಾಚಿಸಿದರು, ಶಿವಪುತ್ರ ಅಮ್ಮಣಗಿ ವಂದಿಸಿದರು.