ಕವನ: ವಿವೇಕನ ನೋಟ

Must Read

ವಿವೇಕನ ನೋಟ

ಭಾರತ ಮಾತೆಯ ಹೆಮ್ಮೆಯ ಸಿಂಹಗಳೇ 

ಏಳಿ ಎದ್ದೇಳಿ ಎಂದು ಕರೆಕೊಟ್ಟು 

ಹೋದ ನನಗೆ ನಿದ್ದೆಯೇ ಇಲ್ಲ 

ಮಲಗಿದವರನ್ನು ಎಚ್ಚರಿಸಬಹುದು 

ಮಲಗಿದಂತೆ ನಾಟಕ ಮಾಡುವವರನ್ನು ನಾ ಹೇಗೆ ಎಚ್ಚರಿಸಲಿ 

ಭರತ ಭೂಮಿಯ ಪುಣ್ಯ ಸಿಂಹಗಳೇ 

ಭಾರತಮಾತೆ ಭರತಭೂಮಿಯ 

ಚರಿತೆ ಮರೆತು ಹೋಯಿತೇ?

ಯುವಕರ ಐಕಾನ್ ಆಗಿದ್ದ ನನ್ನನ್ನು  

ಕೇವಲ ಚಿತ್ರಪಟ ಜನ್ಮದಿನಾಚರಣೆಗೆ ಸೀಮಿತಗೊಳಿಸಿದ್ದೀರಿ 

ಭಾರತ ಬದಲಾಗುವುದನ್ನು ಕಾಣಬೇಕೆಂಬ ಬಯಕೆಯಿಂದ ನನ್ನ ದೂರದೃಷ್ಟಿ ನೆಟ್ಟಿರುವೆ 

ಬದಲಾಯಿಸುವಿರಾ ಭವಿಷ್ಯದ ಭಾರತವ? 

ಸಹೋದರ ಸಹೋದರಿಯರೇ ನಿಮ್ಮೊಡಲಿನಿಂದ ಹೇಳಿ ನನ್ನ 

ಈ  ನೋಟವ ಅರ್ಥ ಮಾಡಿಕೊಳ್ಳಿ 

ನಿಮ್ಮ ಮುಂದಿರುವ ಭವಿಷ್ಯ ಬದಲಾಯಿಸಿಕೊಳ್ಳಿ


ಶಿವಕುಮಾರ ಕೋಡಿಹಾಳ

ಮೂಡಲಗಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group