spot_img
spot_img

ವಚನ ಸಾರ 2: ಅಲ್ಲಮಪ್ರಭು ವಚನ

Must Read

- Advertisement -

ಅಲ್ಲಮಪ್ರಭು ವಚನ 

ರಕ್ಕಸಿಗಿಬ್ಬರು ಮಕ್ಕಳು, ತೊಟ್ಟಿಲ ಮೇಲೈವರು,

ರಕ್ಕಸಿ ಬಾಣತಿಯಾದಡೆ ಮಕ್ಕಳಿಗಿನ್ನೆಂತೊ!

ತೊಟ್ಟಿಲ ತೂಗುವೆ ಜೋಗುಳವಾಡುವೆ

- Advertisement -

ರಕ್ಕಸಿಬಾಣತಿಯ ತೊಟ್ಟಿಲು ನುಂಗಿತ್ತು.

ಇದೇನು ಹೇಳಾ ಗುಹೇಶ್ವರಾ?


ಭವಕ್ಕೆ ಬಂದ ಜೀವ ಅಜ್ಞಾನವಶದಿಂದಾಗಿ ಭವಾವಳಿಯ ಚಕ್ರದಲ್ಲಿ ಸಿಲುಕಿ ಒದ್ದಾಡುತ್ತಿದೆ ತನ್ನ ಅಜ್ಞಾನವನ್ನು ಕಳೆದುಕೊಳ್ಳದ ಹೊರತು ಆ ಜೀವಕ್ಕೆ ಮುಕ್ತಿ ಇಲ್ಲವೆಂಬುದನ್ನು ಈ ಬೆಡಗಿನ ವಚನ ಧ್ವನಿಸುತ್ತದೆ.

- Advertisement -

     ಎಲ್ಲವನ್ನೂ  ನುಂಗಿ ನೊಣೆದು ಹಾಕುವ ಅವಿದ್ಯೆಯೆಂಬ ಮಾಯೆಯೇ ರಕ್ಕಸಿ. ಮನ,  ಬುದ್ಧಿಗಳೆಂಬವರು ಈಕೆಯ ಮಕ್ಕಳು. ದೇಹವೆಂಬುದೇ ತೊಟ್ಟಿಲು. ಇದು ಇಂದ್ರಿಯ ಮನಸ್ಸು, ಬುದ್ಧಿಗಳಿಗೆ ಆಶ್ರಯ ಸ್ಥಾನವಾಗಿದೆ.  ಈ ಪಂಚ ಜ್ಞಾನೇಂದ್ರಿಯಗಳು ಒಂದರ್ಥದಲ್ಲಿ  ಮಾಯೆಯ ಮಕ್ಕಳೇ.  

ಈ ಮಾಯೆಗೆ ಹೇಳತೀರದಷ್ಟು ಹಸಿವಿನ ದಾಹ.  

ಹೀಗಾಗಿ ಈಕೆ ತನ್ನ ಮಕ್ಕಳನ್ನು ಗೋಳಾಡಿಸಿ ದುಃಖಕ್ಕೀಡುಮಾಡಿ ಜೀವ ಹಿಂಡುತ್ತಿದ್ದಾಳೆ. 

ಹೀಗಿರುವಾಗ ಆ ಮಕ್ಕಳ ಹಸಿವಿನ ಗೋಳನ್ನು  ಕೇಳುವವರಾರು? ಈ ಮಕ್ಕಳಿಗೋ ವಿಷಯದ ವಿಪರೀತ ದಾಹ ಇವರನ್ನು ಸಮಾಧಾನಪಡಿಸಲು ತೊಟ್ಟಿಲ(ದೇಹ)ದ  ಅಭಿಮಾನಿಯಾದ ‘ಜೀವ ‘ ನು ತೊಟ್ಟಿಲನ್ನು ತೂಗತೊಡಗಿದನು. ಅಜ್ಞಾನಿಯಾದ ಜೀವನು  ವಿಷಯಸುಖಗಳಲ್ಲಿ ತಲ್ಲೀನನಾಗಿ, ಅದರಲ್ಲಿಯೇ ಮುಳುಗಿ ದಾಹ ತೀರದ್ದಕ್ಕಾಗಿ ಪ್ರಲಾಪಿಸತೊಡಗುತ್ತಾನೆ. 

ಇದನ್ನೇ ಅಲ್ಲಮರು ‘ತೊಟ್ಟಿಲ ತೂಗುವೆ ಜೋಗುಳವಾಡುವೆ’ ಎಂದಿದ್ದಾರೆ. ಕೊನೆಗೆ ಮಕ್ಕಳಿಗೆ ಆಶ್ರಯವಾದ ತೊಟ್ಟಿಲು, ಆ ದೇಹ ಮತ್ತು ಬಾಣತಿಯನ್ನೇ ನುಂಗಿ ಹಾಕುತ್ತದೆ. ರಾಕ್ಷಸ ಸ್ವರೂಪಿ ಮಾಯೆಯ ವಿಷಯಕ್ಕೆ ದೇಹ ಇಂದ್ರಿಯ ಮನ ಬುದ್ಧಿಗಳು ಬಲಿಯಾದವು.

ಹೀಗೆ ಮಾಯೆ ಅಂತರಂಗ ಬಹಿರಂಗದೊಳಗೆ ವ್ಯಾಪಿಸಿ, ತೀರದ ದಾಹವನ್ನುಂಟುಮಾಡಿ ಇಬ್ಬಗೆಯಲ್ಲೂ ಅಶಾಂತಿ, ಅತೃಪ್ತಿ, ಕಷ್ಟ – ನಷ್ಟಗಳನ್ನು ಅನುಭವಿಸುವಂತೆ ಮಾಡಿ, ಬದುಕು ನರಕಸದೃಶ್ಯವಾಗುವಂತೆ ಮಾಡಿತು.ಇದೆಲ್ಲವೂ ಮಾಯೆಯ ವಿಲಾಸ.


ಪ್ರೊ. ಜಿ ಎ. ತಿಗಡಿ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group