ಬೆಳಗಾವಿ – ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ನಿವಾಸಿ ಹಾಗೂ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಸಂಜೀವ ಕ ತಳವಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ ದೊರೆತಿದೆ.
ಅವರು ಡಾ. ದೇವಕನ್ನಿಕಾ ಡಿ ನಗರಕರ್ ಅವರ ಮಾರ್ಗದರ್ಶನದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ ಮಂಡಿಸಿದ ಸಂಶೋಧನಾ (ಇನಾಂದಾರ್ ಅವರ ಕಾದಂಬರಿಗಳಲ್ಲಿ ಮಹಿಳಾ ಪ್ರತಿನಿಧೀಕರಣ) ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.