ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ನಾಟಕ ರಚಿಸಿದವರು ಬಿ.ಪುಟ್ಟಸ್ವಾಮಯ್ಯನವರು

Must Read

ನಾಡಿನ ಹೆಸರಾಂತ ನಾಟಕಕಾರರು ಬಿ.ಪುಟ್ಟಸ್ವಾಮಯ್ಯನವರು 22 ನಾಟಕ 21 ಕಾದಂಬರಿಗಳನ್ನು ರಚಿಸಿದ್ದಾರೆ. ಇವರ ಸಮಕಾಲೀನ ನಾಟಕಕಾರರು ಶ್ರೀರಂಗರು, ಕೈಲಾಸಂ ಕುವೆಂಪು ಮೊದಲಾದವರು ಪಾಶ್ಚಾತ್ಯ ಸಾಹಿತ್ಯದಿಂದ ಪ್ರಭಾವಿತರಾಗಿದ್ದವರು. ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ನಾಟಕಗಳನ್ನು ರಚಿಸಿದವರಲ್ಲಿ ಬಿ.ಪುಟ್ಟಸ್ವಾಮಯ್ಯ, ನಂಜನಗೂಡು ಶ್ರೀಕಂಠಶಾಸ್ತ್ರಿಗಳು, ಬೆಳ್ಳಾವೆ ನರಹರಿ ಶಾಸ್ತ್ರಿಗಳು ಪ್ರಮುಖರು. ಗುಬ್ಬಿ ಕಂಪನಿಗೆ 1933ರಲ್ಲಿ ಬರೆದ ಕುರುಕ್ಷೇತ್ರ  1934ರಲ್ಲಿ ಪ್ರಥಮ ಪ್ರಯೋಗಗೊಂಡು ಇಂದಿಗೂ ಹಳ್ಳಿ ನಗರಗಳಲ್ಲಿ  ಪ್ರದರ್ಶನವಾಗುತ್ತಿರುವುದು ಅದರ ಜನಪ್ರಿಯತೆ ಸಾಕ್ಷಿ ಎಂದು ನಾಟಕಕಾರ ಎಸ್.ಎಸ್. ಪುಟ್ಟೇಗೌಡರು ತಿಳಿಸಿದರು.

ಹಾಸನ ಮನೆ ಮನೆ ಕವಿಗೋಷ್ಠಿ ಸಾಹಿತ್ಯ ಸಂಘಟನೆಯ 314ನೇ ತಿಂಗಳ ಸಾಹಿತ್ಯ ಕಾರ್ಯಕ್ರಮ ಹೆಚ್.ಜಿ.ಗಂಗಾಧರ್ ಅಧ್ಯಕ್ಷರು ಶ್ರೀ ಶಾರದ ಕಲಾಸಂಘ ಹಾಸನ  ಪ್ರಾಯೋಜಕತ್ವದಲ್ಲಿ ಹಾಸನಾಂಬ ಥಿಯಾಸಾಫಿಕಲ್ ಸೊಸೈಟಿ ವಾಣಿ ವಿಲಾಸ ರಸ್ತೆ ಇಲ್ಲಿ ಭಾನುವಾರ ನಡೆದ ಉಪನ್ಯಾಸ ಮತ್ತು ಕವಿಗೋಷ್ಠಿಯಲ್ಲಿ ನಾಟಕಕಾರ ಬಿ.ಪುಟ್ಟಸ್ವಾಮಯ್ಯ ಮತ್ತು ಅವರ ಕುರುಕ್ಷೇತ್ರ ನಾಟಕ ಕುರಿತಾಗಿ ಮಾತನಾಡಿ ವಿಶ್ಲೇಷಿಸಿದರು.

ಕವಿ ಎನ್.ಎಲ್.ಚನ್ನೇಗೌಡರು ಮಾತನಾಡಿ, ನಾಟಕದ ಮೇಷ್ಟ್ರು ಮೂಲ ನಾಟಕದ ಸಂಭಾಷಣೆಗೆ ಹೆಚ್ಚು ಒತ್ತುಕೊಟ್ಟು ಹಾಡುಗಳನ್ನು ಕಡಿಮೆ ಮಾಡಿದರೆ ಒಳಿತೆಂದರು. ನಾಟಕಕಾರ ಗೊರೂರು ಅನಂತರಾಜು ಮಾತನಾಡಿ, ರಂಗಭೂಮಿಯ ಚಟುವಟಿಕೆಗೆ ಶುದ್ಧ ಸಾಹಿತ್ಯ ಸ್ಪರ್ಶ ತಂದು ಹೊಸ ಆಯಾಮ ಮೂಡಿಸಿದರು ಪುಟ್ಟಸ್ವಾಮಯ್ಯನವರು. 3 ಗಂಟೆ ಅವಧಿಯ ನಾಟಕ ರಂಗಗೀತೆಗಳ ವಿಸ್ತರಿಸುವಿಕೆಯಿಂದ 8 ಗಂಟೆ ದಾಟಿ ಬೆಳೆದಿದೆ. ವಿಮರ್ಶಕರ ಅಭಿಪ್ರಾಯ ಏನೇ ಇದ್ದರೂ ನಾಟಕದ ಮೇಷ್ಟ್ರು ಹೊಸ ಹೊಸದಾಗಿ ಅಳವಡಿಸುತ್ತಾ ಬಂದ ರಂಗಗೀತೆಗಳೇ ನಾಟಕದಲ್ಲಿ ಮೇಲುಗೈ ಸಾಧಿಸಿರುವುದನ್ನು ಅಲ್ಲಗಳೆಯುವಂತಿಲ್ಲ ಎಂದರು.

ಕವಿಗೋಷ್ಠಿಯಲ್ಲಿ ರೇಖಾ ಪ್ರಕಾಶ್, ಲಲಿತ ಎಸ್., ಮಂಜುನಾಥ್‍ಎಂ, ಸರೋಜ ಟಿ.ಎಂ. ಮಲ್ಲೇಶ್ ಜಿ. ಚೂಡಾಮಣಿ  ಹೆಚ್.ಬಿ. ಅರ್ಪಿತ ಎಸ್. ಪದ್ಮಾವತಿ ವೆಂಕಟೇಶ್, ಯಮುನಾವತಿ ಹೆಚ್.ಕೆ. ಎನ್.ಎಲ್.ಚನ್ನೇಗೌಡ, ಗೊರೂರು ಅನಂತರಾಜು, ಎಂ.ವಿ.ಸೀತಮ್ಮ., ಕಾಮಾಕ್ಷಿ ಕವಿತೆ ವಾಚಿಸಿದರು. 

ವೆಂಕಟೇಗೌಡರು ಭೀಮನ ಪಾತ್ರದ ಹಾಡು ಹಾಡಿದರೆ ಪುಟ್ಟೇಗೌಡರು ಧುರ್ಯೋಧನ ಪಾತ್ರ ನಟಿಸಿದರು. ಗೊರೂರು ಧನಲಕ್ಷ್ಮಿ ಮತ್ತು ಶ್ರೀಕಾಂತ್ ಹಳೆಯ ಪೌರಾಣಿಕ ಸಿನಿಮಾ ಹಾಡುಗಳಿಂದ ಮನ ಸೆಳೆದರು. ಹೆಚ್.ಜಿ.ಗಂಗಾಧರ್ ಎಸ್.ಪ್ರಭ ಭಕ್ತಿಗೀತೆ. ಹಚ್.ಕೆ.ಬಾಲಕೃಷ್ಣ ಜನಪದ ಗೀತೆ ಹಾಡಿದರು. ರಾಣಿ, ಪುಟ್ಟಮ್ಮ, ಎಸ್.ನಿರ್ಮಲ ಚಂದ್ರಶೇಖರ್, ತುಳಸಿ ಮುರಳೀದರ್, ಜಯಲಕ್ಷ್ಮಿ ಆರ್. ಠಾಕೂರ್. ವಿಶಾಲಾಕ್ಷಿ ಜಗದೀಶ್. ಶಾಮಲ, ಸಾವಿತ್ರಿ ಮೊದಲಾದವರ ಸಮೂಹ ಗೀತೆ ಪ್ರೇಕ್ಷಕರ ಮನ ಸೆಳೆಯಿತು. ಜಯದೇವಪ್ಪ, ಯಾಕೂಬ್, ಕುಮಾರ್, ಹೆಚ್. ಟಿ.ನಾರಾಯಣಚಾರ್, ಡಿ.ಸಿ.ತಿಪ್ಪೇಸ್ವಾಮಿ, ಮೀನಾಕ್ಷಿ ಇದ್ದರು. ಹೆಚ್.ಜಿ.ಗಂಗಾಧರ್ ಪ್ರಾರ್ಥಿಸಿದರು. ಗೊರೂರು ಅನಂತರಾಜು ಕಾರ್ಯಕ್ರಮ ನಿರೂಪಿಸಿದರು.

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...

More Articles Like This

error: Content is protected !!
Join WhatsApp Group