ರಾಜ್ಯಮಟ್ಟದ ಶ್ರಮಿಕ ರತ್ನ ಪ್ರಶಸ್ತಿಗೆ ವೈ,ಎಫ್.ಶಾನುಭೋಗ ಆಯ್ಕೆ

Must Read

ಮುನವಳ್ಳಿಃ ಪಟ್ಟಣದ ನಿವೃತ್ತ ಶಿಕ್ಷಕ ಹಾಗೂ ಕಲಾವಿದ ಸಾಹಿತಿ ವಾಯ್.ಎಫ್.ಶಾನುಭೋಗ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

     ಸಮಾಜದ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ನೀಡುವ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿ ಇದಾಗಿದೆ.     

      ರೋಷನ್ ಕೇರ್ ಪೌಂಢೇಶನ್ ಬೆಂಗಳೂರು ಹಾಗೂ ಧಾರವಾಡದ ಸಾಧನಾ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸಂರಕ್ಷಣಾ ಕೇಂದ್ರದ ಆಶ್ರಯದಲ್ಲಿ ಫೆ.೨೪ರಂದು ಧಾರವಾಡದ ಪಾಟೀಲ ಪುಟ್ಟಪ್ಪ ಸಭಾಭವನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇವರಿಗೆ ರಾಜ್ಯಮಟ್ಟದ ಶ್ರಮಿಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಇವರು ರಚಿಸಿದ ಸಂಗೊಳ್ಳಿ ರಾಯಣ್ಣ ನಾಟಕ ಶಾಲಾ ಮಕ್ಕಳಿಂದ ರಂಗ ಪ್ರಯೋಗಗೊಂಡು ಯಶಸ್ವಿಯಾಗಿದೆ.ಇಷ್ಟರಲ್ಲೇ ಮುದ್ರಣ ಕೂಡ ಕಾಣಲಿದೆ.ಇದೇ ಸಂದರ್ಭದಲ್ಲಿ ವೈ.ಬಿ.ಕಡಕೋಳ ಸಂಪಾದಿತ ಭಜನಾಕಾರ ದಿವಂಗತ ಚಂದ್ರಪ್ಪ ಚಲವಾದಿ ಕೃತಿ ಕೂಡ ಲೋಕಾರ್ಪಣೆಯಾಗುವುದು ಎಂದು ಕಾರ್ಯಕ್ರಮ ಸಂಘಟಿತ ಶಿಕ್ಷಕ ಎಲ್.ಐ.ಲಕ್ಕಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group