ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಹಳ ಆಹ್ವಾನ

Must Read

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ 2023ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳಿಸಬಹುದು. 2023ರಲ್ಲಿ ಪ್ರಕಟಗೊಂಡ ಕೃತಿಯ ನಾಲ್ಕು ಪ್ರತಿಗಳನ್ನು ರಜಿಸ್ಟರ್ಡ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು. ಈ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಕೃತಿಗಳನ್ನು ಮಾರ್ಚ 31ರೊಳಗಾಗಿ ತಲುಪುವಂತೆ ಹ.ಮ. ಪೂಜಾರ, ನಿವೃತ್ತ ಶಿಕ್ಷಕರು, ಶ್ರೀ ಸಂಗಮೇಶ್ವರ ಕಾಲನಿ, ಸಿಂದಗಿ-586 128, ಜಿಲ್ಲಾ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ಐದು ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹ.ಮ. ಪೂಜಾರ ಮೊಬೈಲ್ ನಂ.:9448644228ಗೆ ಸಂಪರ್ಕಿಸಬೇಕು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಟಣೆ ತಿಳಿಸಿದೆ.

Latest News

ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ

371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ...

More Articles Like This

error: Content is protected !!
Join WhatsApp Group