ಮಹಾರತ್ನ ಟ್ರಸ್ಟ್ ನಿಂದ ಸಂಗೀತ ರತ್ನ ಹಾಗೂ ಸಾಹಿತ್ಯ ರತ್ನ ಪ್ರಶಸ್ತಿ ಪುರಸ್ಕಾರ

Must Read

ಮೈಸೂರಿನ ಮಹಾರತ್ನ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಜಗನ್ಮೋಹನ ಅರಮನೆಯಲ್ಲಿ  2ನೇ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಹಾಗೂ ಶಿಕ್ಷಕ ವೀರಭದ್ರಯ್ಯ ಹಿರೇಮಠ ಅವರಿಗೆ ಸಂಗೀತ ರತ್ನ ಹಾಗೂ ಪ್ರಸಿದ್ಧ ಕವಿ ಡಾ.ಜಯಪ್ಪ ಹೊನ್ನಾಳಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ನಟ ಶಂಕರ ಅಶ್ವತ್ಥ ಅವರು ನೀಡಿ ಸನ್ಮಾನಿಸಿ, ಗೌರವಿಸಿದರು.

ಖಜಾಂಜಿ ನಾಗರತ್ನ, ಅಧ್ಯಕ್ಷ ಎಂ.ಮಹಾಲಿಂಗ, ಪ್ರೊ.ಮೈಸೂರು ಕೃಷ್ಣಮೂರ್ತಿ, ಕವಿಯತ್ರಿ ಶ್ರೀಮತಿ ಮ.ನ.ಲತಾ ಮೋಹನ್, ಕಾರ್ಯದರ್ಶಿ ಶ್ರೀಮತಿ ರೂಪ, ಸಹ ಕಾರ್ಯದರ್ಶಿ ಶ್ರೀಮತಿ ನಾಗಶ್ರೀ ಎನ್. ಹಾಗೂ ಮುಂತಾದವರನ್ನು ಉಪಸ್ತಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಯಿತು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group