spot_img
spot_img

ಎದೆಯ ಮೇಲೆ ಖಂಡ್ರೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

Must Read

- Advertisement -

ಬೀದರ :ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಮೇಲಿನ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ನಾಯಕರಾದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

ಬೀದರ್‌ ತಾಲೂಕಿನ ಕಮಠಾಣ ಗ್ರಾಮದ ಶಿವಾಜಿ ಗಾಯಕವಾಡ ಎಂಬುವರು ತಮ್ಮ ಎದೆಯ ಎಡ ಭಾಗದ ಮೇಲೆ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

ಟ್ಯಾಟೂ ಹಾಕಿಸಿಕೊಂಡ ಶಿವಾಜಿ ಗಾಯಕವಾಡ ಮಾತನಾಡಿ, “ಕಳೆದ ಹತ್ತು ವರ್ಷಗಳಿಂದ ನಾನು ಸಚಿವ ಈಶ್ವರ ಖಂಡ್ರೆಯವರ ಅಭಿಮಾನಿ, ಅಂದಿನಿಂದ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಳ್ಳಬೇಕೆಂಬ ಆಸೆಯಿತ್ತು. ಈಗ ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡು ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ತೋರಿಸಿದ್ದೇನೆ. ಇಂದು ಕಮಠಾಣ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರನ್ನು ಭೇಟಿಯಾಗಿ ಟ್ಯಾಟೂ ತೋರಿಸಿದ್ದೇನೆ” ಎಂದಿದ್ದಾರೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group