spot_img
spot_img

ಆರ್ಯವೈಶ್ಯ ಸಮಾಜದಿಂದ ಕನ್ನಿಕಾ ಪರಮೇಶ್ವರಿ ಜಯಂತ್ಯುತ್ಸವ : ಕುಂಕುಮಾರ್ಚನೆ,ಉಡಿ ತುಂಬುವ ಕಾರ್ಯಕ್ರಮ

Must Read

spot_img
- Advertisement -

ಹುನಗುಂದ: ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜ ಬಾಂಧವರಿಂದ ಶುಕ್ರವಾರ ಕನ್ನಿಕಾ ಪರಮೇಶ್ವರಿ ಜಯಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಕುಂಕುಮಾರ್ಚನೆ, ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಆಚರಿಸಲಾಯಿತು.

ಜಯಂತ್ಯುತ್ಸವ ನಿಮಿತ್ತ ದೇವಸ್ಥಾನದಲ್ಲಿ ತಳಿರು ತೋರಣ ಕಟ್ಟಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.ಬೆಳಗ್ಗೆ 5:00 ಗಂಟೆಯಿಂದ ದೇವಸ್ಥಾನದಲ್ಲಿ ವಿವಿಧ ಪೂಜಾ ಧಾರ್ಮಿಕ ಕೈಂಕರ್ಯ ಜರುಗಿದವು. ಬೆಳಗ್ಗೆ 6:00 ಗಂಟೆಗೆ ಕನ್ನಿಕಾ ಪರಮೇಶ್ವರಿ ಮೂರ್ತಿಗೆ ಅಲಂಕಾರ, ದೇವಿಯ ಅಷ್ಟೋತ್ತರ ಪಾರಾಯಣ, ಸಹಸ್ರನಾಮಾವಳಿ ಸಹಿತ ಕುಂಕುಮಾರ್ಚನೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾ ಮಂಗಳಾರತಿ,ಮಂತ್ರ ಪುಷ್ಪ,ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.

ಇದೆ ವೇಳೆ ಜನಾದ್ರಿ ಕುಟುಂದವರು ಸಮಾಜದವರಿಗೆ ಕುಂಕುಮಾರ್ಚನೆ ಮಾಡಿದರು. ಹಾಗೂ ಡಾ. ಶಿವಶಂಕರ ಮುದಗಲ್ ಇವರಿಂದ 108 ಬಳೆಗಳನ್ನು ಸೇವೆ ಮಾಡಿದರು.

- Advertisement -

ಸಮಾಜದ ಪ್ರಮುಖರಾದ ಸತ್ಯನಾರಾಯಣ ಜನಾದ್ರಿ, ಮುತ್ತಣ್ಣ ಮುದಗಲ್, ಸಂಗಮೇಶ್ವರ ಓಬಳ್ಳೆಪ್ಪನವರ, ವಾಸು ಹಳ್ಳಿಕೇರಿ, ಭಕ್ತ ಪ್ರಹ್ಲಾದ ಜನಾದ್ರಿ, ವೆಂಕಟೇಶ ಜನಾದ್ರಿ, ರಾಜಶೇಖರ ಜನಾದ್ರಿ, ಗಜೇಂದ್ರ ಜನಾದ್ರಿ,ಶ್ರೀಕಾಂತ ಜನಾದ್ರಿ,ವಿನಾಯಕ ಜನಾದ್ರಿ,ಮಯೂರ ಜನಾದ್ರಿ,ವೀರೇಶ ಮುದಗಲ್ಲ ಸೇರಿದಂತೆ ಅನೇಕರು ಇದ್ದರು.

 

- Advertisement -
- Advertisement -

Latest News

ಕವನ : ಏನೆಂದು ಹೇಳಲಿ…

ಏನೆಂದು ಹೇಳಲಿ.... ಬಹಳಷ್ಟು ಸಲ ಎದುರಾದವರೆಲ್ಲ ಕೇಳುತ್ತಾರೆ ಯಾಕೆ ಬರೆಯುತ್ತಿಲ್ಲ ಈಗೀಗ ಅವರ ಪ್ರಶ್ನೆಗಳಿಗೆಲ್ಲ ಉತರಿಸಲು ಉತ್ತರಗಳಿಲ್ಲ ನನ್ನಲ್ಲಿ ಬರೆಯಲು ಭಾವನೆಗಳು ತುಂಬಿ ಬರಬೇಕು ಖಾಲಿ ಹಾಳೆಯ ಜೊತೆಗೆ ಪೆನ್ನು...
- Advertisement -

More Articles Like This

- Advertisement -
close
error: Content is protected !!
Join WhatsApp Group