ಜ್ಞಾನೋದಯ ಪಿಯು ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Must Read

ಮೈಸೂರು -ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನಲ್ಲಿ ಜೂ.14 ರಂದು ಜಿಎಸ್‍ಎಸ್ ಗ್ರೂಪ್, ಲಯನ್ಸ್ ಮೈಸೂರು ಮತ್ತು ಜೀವಧಾರಾ ಬ್ಲಡ್ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಹೆಚ್ಚಿನ ಸಂಖ್ಯೆಯಲ್ಲಿ ಜ್ಞಾನೋದಯ ಪಿಯು ಕಾಲೇಜಿನ ಪೋಷಕರು ಹಾಗೂ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು.

ಸುಮಾರು 25 ಯೂನಿಟ್ ರಕ್ತವನ್ನು ಕಾಲೇಜು ಸಿಬ್ಬಂದಿ, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ದಾನ ಮಾಡಿದರು. ಮುಖ್ಯ ಅತಿಥಿಯಾಗಿ ಯೋಗಾತ್ಮ ಶ್ರೀಹರಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀಹರಿ ದ್ವಾರಕನಾಥ್ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಕ್ತದಾನದ ಅವಶ್ಯಕತೆ ಮತ್ತು ಅಗತ್ಯತೆ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ವಿವಿಧ ಆಸ್ಪತ್ರೆಗಳ ಮತ್ತು ಆರೋಗ್ಯ ಚಿಕಿತ್ಸಾಲಯಗಳ ವೈದ್ಯಕೀಯ ಬಂಧುಗಳು, ಜ್ಞಾನೋದಯ ಪಿಯು ಕಾಲೇಜಿನ ಆಡಳಿತ ಮಂಡಳಿಯ ರಾಮಚಂದ್ರ, ಎಸ್.ಕೆ.ಭಾಸ್ಕರ್, ಪ್ರಾಂಶುಪಾಲರಾದ ಶ್ರೀಮತಿ ಪದ್ಮಾರವಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಶಿಬಿರದಲ್ಲಿ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group