ಸಿದ್ದಯ್ಯ ಪುರಾಣಿಕರ ಸಾಹಿತ್ಯ ರಾಶಿ ವಿಪುಲವಾಗಿದೆ ; ಮೃತ್ಯುಂಜಯ ಸ್ವಾಮಿಗಳು ಹಿರೇಮಠ

Must Read

ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಜಿಲ್ಲೆಯ ಶತಮಾನ ಕಂಡ ಸಾಹಿತಿಗಳ ತಿಂಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಮೃತುಂಜಯ ಸ್ವಾಮಿಗಳು ಹಿರೇಮಠ ಅವರು ಉಪನ್ಯಾಸ ನೀಡುತ್ತಾ, ಕನ್ನಡ ನಾಡು ಕಂಡ ಶ್ರೇಷ್ಠ ಅಧಿಕಾರಿಗಳು ಮತ್ತು ಸಾಹಿತಿಗಳಲ್ಲಿ ಒಬ್ಬರಾದ ಸಿದ್ದಯ್ಯ ಪುರಾಣಿಕರು ವಚನ ಬಿರುದಾಂಕಿತ ಕಾವ್ಯಾನಂದ ವಚನೋದ್ಧಾರಕ ಅನುಭಾವಿ ಬಿರುದಾಂಕಿತ ಕಾವ್ಯಾನಂದ ಕಾವ್ಯನಾಮ ಅಂಕಿತ ಐಎಎಸ್ ಸಹೃದಯತೆಯ ಶ್ರೇಷ್ಠ ಸಾಹಿತಿಗಳು ಎಂದರು.

ಏನಾದರೂ ಆಗು ಮೊದಲು ಮಾನವನಾಗು ಎಂದು ಸಂದೇಶ ನೀಡಿದ ಕನ್ನಡಕ್ಕೆ ಕಾವ್ಯದ ಆನಂದ ನೀಡಿದ ಕವಿ ಎಂದು ಪುರಾಣಿಕ ಅವರು ಬಾಲ್ಯದಿಂದ ಹಿಡಿದು ಕೊನೆಯವರೆಗೆ ಮಾಡಿದ ಸಾಧನೆಗಳ ಬಗ್ಗೆ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮಂಗಳ ಮೆಟಗುಡ್ಡ ಅವರು ಮಾತನಾಡಿ, ಪುರಾಣಿಕರು ಕಾವ್ಯ ,ಮಕ್ಕಳ ಸಾಹಿತ್ಯ, ನಾಟಕ, ಜೀವನ ಚರಿತ್ರೆ, ಕಾದಂಬರಿ, ಕಥೆ ,ಅನುವಾದ, ವಚನ ಸಾಹಿತ್ಯ ಹೀಗೆ,ಆಡು ಮುಟ್ಟದ ಎಲೆ ಇಲ್ಲದಂತೆ ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದರು ಎಂದರು

ಎಂವೈ ಮೆಣಸಿನಕಾಯಿಯವರು ಮಾತನಾಡಿ,  ಆಶಾವಾದಿಯ ವಿಷಾದ ವಿದ್ಯೆ ಬಂತು ವಿನಯಹೋಯಿತು ಎಂದು ಹೇಳಿ, ಪುರಾಣಿಕರ  ವಚನ ಹೇಳಿದರು ಹಾಗೂ ಹಾಗೂ ಕನ್ನಡ ಸಾಹಿತ್ಯ ಸಾಹಿತ್ಯ ಪರಿಷತ್ತಿನ ಮುಂದೆ ಮಾಡಬೇಕಾದ ಕಾರ್ಯಗಳು ಮತ್ತು ಸದಸ್ಯತ್ವ ನವೀಕರಣ ಕುರಿತು ಪ್ರಾಸ್ತಾವಿಕ ಮಾತನಾಡಿದರು

ಪ್ರಾಚಾರ್ಯ ವಿರುಪಾಕ್ಷಿ ದೊಡ್ಡಮನಿ ಸುರೇಶ ನರಗುಂದ ಕ ಸಾ ಪ ಮಾಜಿ ಅಧ್ಯಕ್ಷ ಮೋಹನ್ ಗೌಡ ಪಾಟೀಲ ಮಾತನಾಡಿದರು. ವ್ಹಿ ಎಮ್ ಅಂಗಡಿ ಸರ್ವರನ್ನು ಸ್ವಾಗತಿಸಿದರು ಮಹಾನಂದ ಪಾರು ಶೆಟ್ಟಿ ನಾಡಗೀತೆ ವಚನ ಹೇಳಿದರು ವಿದ್ಯಾ ಸಿದ್ದಪ್ಪ ಕಾಗಿ ಹಾಗೂ ಇತರರನ್ನ ಸನ್ಮಾನಿಸಲಾಯಿತು ಡಾಕ್ಟರ್ ಹೇಮಾ ಸೊನಳ್ಳಿ ನಿರೂಪಿಸಿದರು ಆರ ಬಿ ಬನಶಂಕರಿ ಪರಿಚಯಿಸಿದರು . ಶಂಕರ್ ಬಾಯಿ ಕೆ ನಿಂಬಾಳಕರ.ಶಿವಾನಂದ ತಲ್ಲೂರ, ಶ್ರೀರಂಗ ಜೋಶಿ, ಬಿ ಬಿ ಮಠಪತಿ, ಬಾಳಗೌಡ ದೊಡ್ಡಬಂಗಿ , ರತ್ನಪ್ರಭಾ ಬೆಲ್ಲದ,ಸುಧಾ ಪಾಟೀಲ್, ದಾನಮ್ಮ ಅಂಗಡಿ, ಇತರ ಉಪಸ್ಥಿತರಿದ್ದರು. ಕೊನೆಗೆ ಜ್ಯೋತಿ ಬದಾಮಿ ವಂದಿಸಿದರು


 

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group