ಕವನ

Must Read

ಜಗವೆ ಕೂಡಲ ಸಂಗಮ

ಬಸವ ಬಳ್ಳಿ ಲಿಂಗ ಜಂಗಮ
ಜಗವೆ ಕೂಡಲ ಸಂಗಮ.
ಅರಿವೇ ಗುರುವು ,ನಡೆಯು ಲಿಂಗ
ನುಡಿಯೇ ಅಮರ ಜಂಗಮ .

ಅಂಗವಳಿದು ಲಿಂಗವಿಡಿದು
ಶರಣ ಬಾಳು ಸ್ಪಂದನ .
ಲಿಂಗ ಮಜ್ಜನ ಪಾದದುದಕ
ಅರಿವು ಸ್ಪೂರ್ತಿಯ ಸಿಂಚನ .

ಸತ್ಯವೆಂಬುದೆ ನಿತ್ಯ ಪಠಣ,
ನೀತಿ ಪಾಠದ ಮಂಥನ .
ನೆಲದ ಮೇಲೆ ಬೆಳಕು ಚೆಲ್ಲಿದೆ
ಜಗದಿ ನಿತ್ಯ ವಚನ ಚಿಂತನ .

ಒಂದು ಮಾಡಿದ ಹಿರಿದು ಕಿರಿದು
ಸಮತೆವೆಂಬ ದೀಪವು .
ಉಚ್ಚ ನೀಚ ಭೇದ ಹರಿಯಿತು
ಅದುವೇ ಧರ್ಮ ಧೂಪವು .

ಗುಡಿಗಳೆಲ್ಲ ನಲುಗಿ ಹೋದವು
ವೇದ ಶಾಸ್ತ್ರ ಪುರಾಣವು .
ದಲಿತ -ಮಹಿಳೆ -ಅಸಹಾಯಕರು
ಬಸವ ಧರ್ಮದ ಒಡೆಯರು

ಜಿಡ್ಡುಗಟ್ಟಿದ ಕಟ್ಟು ಕಳಚಿತು
ಮುಕ್ತ ವಿಶ್ವದ ಪ್ರೇಮವು .
ಬಸವನುಸಿರೆ ದಿವ್ಯ ಮಂತ್ರವು ,
ಲಿಂಗವಂತ ಸ್ವತಂತ್ರವು

ಡಾ. ಶಶಿಕಾಂತ. ರು. ಪಟ್ಟಣ -ಪೂನಾ

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group