ಘಟಪ್ರಭಾ ಎಎಸ್ಐ ಅಮಾನತಿಗೆ ಆಗ್ರಹ

Must Read

ಘಟಪ್ರಭಾ- ಅಪಘಾತವೊಂದಕ್ಕೆ ಸಂಬಂಧಿಸಿದಂತೆ ಬೋವಿ ಸಮಾಜದ ಯುವಕನನ್ನು ಅನವಶ್ಯಕವಾಗಿ ಅರೆಸ್ಟ್ ಮಾಡಿದ್ದಲ್ಲದೆ ಉಪ್ಪಾರ ಸಮಾಜದ ಹಿರಿಯರು ಹಾಗೂ ಗೋಕಾಕ ತಾಲೂಕಾ ಪಂಚಾಯತ ಸದಸ್ಯ ನಿಂಗಣ್ಣ ಮಾಳ್ಯಾಗೋಳ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟಪ್ರಭಾ ಪೊಲೀಸ್ ಠಾಣೆಯ ಎಎಸ್ಐ ಬಿ.ಎಸ್. ಚಿನ್ನಿಕುಪ್ಪಿ ಅವರನ್ನು ಅಮಾನತ್ತು ಮಾಡಿ ವರ್ಗಾವಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ, ನ್ಯಾಯವಾದಿ ಮಲ್ಲಿಕಾರ್ಜುನ ಚೌಕಾಶಿ ನೇತೃತ್ವದಲ್ಲಿ ಠಾಣಾ ಇನ್ಸ್ ಪೆಕ್ಟರ್ ಬಸವರಾಜ ಕಾಮನಬೈಲ್ ಅವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ವಿಠ್ಠಲ ಮೆಳವಂಕಿ, ಭೀಮಪ್ಪ ಹಂದಿಗುಂದ, ಬೋವಿ ಸಮಾಜದ ಜಿಲ್ಲಾಧ್ಯಕ್ಷ ವಿಲಾಸ ಗಾಡಿವಡ್ಡರ, ಅಶೋಕ ಗಾಡಿವಡ್ಡರ, ಬರಮಣ್ಣ ಗಾಡಿವಡ್ಡರ, ಗುರು ಗಂಗಣ್ಣವರ, ಮಲ್ಲಿಕಾರ್ಜುನ ಅರಭಾವಿ, ಪಾಂಡು ಭೋಜಿ, ಕಾಶಪ್ಪ ನಿಂಗಣ್ಣವರ, ನಾಗಪ್ಪ ಮಳಾಜಗೋಳ, ಎಲ್ ಜಿ ಗಾಡಿವಡ್ಡರ, ರವಿ ಗಾಡಿವಡ್ಡರ, ರವಿ ಮಹಾಲಿಂಗಪೂರ, ಮೋಹನ ಗಾಡಿವಡ್ಡರ, ವಸಂತ ಗಾಡಿವಡ್ಡರ ಸೇರಿದಂತೆ ಉಪ್ಪಾರ ಹಾಗೂ ವಡ್ಡರ ಸಮಾಜ ಬಾಂಧವರು ಹಾಜರಿದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group