ರೈತರು ಆತ್ಮಹತ್ಯೆಯಂಥ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ – ಬಾಲಚಂದ್ರ ಜಾತಕಿಹೊಳಿ

Must Read

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಣೆ

ಗೋಕಾಕ – ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ ಮಾಡಿಕೊಂಡರೇ ಇಡೀ ಕುಟುಂಬವು ಬೀದಿಗೆ ಬರುತ್ತದೆ. ಆತ್ಮಹತ್ಯೆಯಂತಹ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ. ಸರ್ಕಾರಗಳ ಎಲ್ಲ ಸೌಲಭ್ಯಗಳನ್ನು ಕ್ಷೇತ್ರದ ಎಲ್ಲ ರೈತರಿಗೆ ತಲುಪಿಸುವುದರೊಂದಿಗೆ ಅವರ ಸಮಸ್ಯೆಗಳಿಗೆ ಸದಾ ನಾವು ಸ್ಪಂದಿಸುತ್ತಿದ್ದೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅರಭಾವಿ ಕ್ಷೇತ್ರದ ನಲ್ಲಾನಟ್ಟಿ ಗ್ರಾಮದ ರಾಜೇಂದ್ರ ಕುಳ್ಳೂರ, ಕುಲಗೋಡ ಗ್ರಾಮದ ಸುಭಾಶ ದಾಸರೆಡ್ಡಿ, ದುರದುಂಡಿಯ ಸಿದ್ದಪ್ಪ ಅಂತರಗಟ್ಟಿ ಕುಟುಂಬಗಳಿಗೆ ತಲಾ 5ಲಕ್ಷದಂತೆ 15 ಲಕ್ಷ ರೂ.ಗಳ ಮಂಜೂರಾತಿ ಆದೇಶ ಪತ್ರವನ್ನು ಶಾಸಕರು ವಿತರಿಸಿದರು.

ಈ ಸಂದರ್ಭದಲ್ಲಿ ಟಿಎಪಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಮುಖಂಡರುಗಳಾದ ಮುತ್ತೆಪ್ಪ ಕುಳ್ಳೂರ, ಸಿದ್ರಾಮ ಕುಳ್ಳೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಮ್.ಎಮ್.ನದಾಫ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group