- Advertisement -
ಮೈಸೂರು -ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪಿಯು ಕಾಲೇಜಿನಲ್ಲಿ (ಜು.೨೬ ರಂದು ) ೨೫ನೇ ಕಾರ್ಗಿಲ್ ವೀರ ಯೋಧರ ಸ್ಮರಣಾರ್ಥ ‘ಕಾರ್ಗಿಲ್ ವಿಜಯ ದಿವಸ’ವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ತ್ಯಾಗ ಮತ್ತು ಬಲಿದಾನ ಮಾಡಿದ ಕಾರ್ಗಿಲ್ ಯುದ್ಧದ ದೃಶ್ಯಾವಳಿಗಳನ್ನು ವೀಡಿಯೋ ಚಿತ್ರೀಕರಣದೊಂದಿಗೆ ತೋರಿಸಲಾಯಿತು.
ವಿದ್ಯಾರ್ಥಿಗಳು ಕಾರ್ಗಿಲ್ ವಿಜಯದಲ್ಲಿ ನಮ್ಮ ಕದನ ಕಲಿಗಳ ಯಶೋಗಾಥೆಯನ್ನು ತಮ್ಮದೇ ಮಾತುಗಳಲ್ಲಿ ವಿವರಿಸಿದರು. ಅಲ್ಲದೇ ದೇಶಕ್ಕಾಗಿ ವೀರ ಮರಣ ಹೊಂದಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.
- Advertisement -
ಈ ಕಾರ್ಯಕ್ರಮದಲ್ಲಿ ಸಂಸ್ಥೆ ಪ್ರಾಂಶುಪಾಲೆ ಶ್ರೀಮತಿ ಪದ್ಮಾರವಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.