ಸೋಮವಾರ ಶಾಲೆ ಸೂಟಿ ಇಲ್ಲ ; ಶಿಕ್ಷಕರು ಮುಷ್ಕರದಲ್ಲಿ ಪಾಲ್ಗೊಳ್ಳದಿರಲು ಸೂಚನೆ

Must Read

ಬೆಂಗಳೂರು – ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ರಾಜ್ಯ ಶಿಕ್ಷಕರ ಸಂಘದ ಸದಸ್ಯರು ಹಾಗು ಎಲ್ಲ ಶಿಕ್ಷಕರು ಇದೇ ದಿ. ೧೨ ರಂದು ಸೋಮವಾರ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲರಿಗೂ ತಿಳಿದ ವಿಷಯ.

ಆದರೆ ರಾಜ್ಯ ಶಿಕ್ಷಣ ಇಲಾಖೆಯು ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದ್ದು ಅಂದು ರಾಜ್ಯದ ಶಿಕ್ಷಕರು ಶಾಲೆಗೆ ರಜೆ ನೀಡಬಾರದು ಎಂದು ಸೂಚನೆ ನೀಡಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ,ಕರ್ನಾಟಕ ರಾಜ್ಯ ಸಿವಿಲ್ ಸೇವೆ ( ನಡತೆ) ಯ ನಿಯಮಗಳು- ೨೦೨೧ ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆಯ ಉಲ್ಲಂಘನೆ ಯಾಗುವುದರಿಂದ ದಿ.೧೨ ರಂದು ಶಾಲೆಗಳನ್ನು ಮುಚ್ಚಿ ಭಾಗವಹಿಸಲು ಅಥವಾ ಪಾಠಗಳನ್ನು ನಡೆಸಲು ಅಡಚಣಿ ಮಾಡಲು ಅವಕಾಶವಿರುವದಿಲ್ಲ ಎಂದು ತಿಳಿಸಿದ್ದಾರೆ
ಈ ಬಗ್ಗೆ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆಡಳಿತ) ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ತಿಳಿಸಿ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿ ಕರ್ತವ್ಯ ಬಿಟ್ಟು ಮುಷ್ಕರದಲ್ಲಿ ಪಾಲ್ಗೊಂಡರೆ ಅಂಥ ಶಿಕ್ಷಕ/ಮುಖ್ಯ ಶಿಕ್ಷಕರ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ಇಲಾಖೆಯ ಮುಖ್ಯಸ್ಥರು ಸೂಚನೆ ನೀಡಿದ್ದಾರೆ.

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...

More Articles Like This

error: Content is protected !!
Join WhatsApp Group