ಕವನ: ಮೇರು ಕನಕ

Must Read

ಮೇರು_ಕನಕ

ವ್ಯಾಸರು ಮೆಚ್ಚಿದ
ದಾಸರ ಪಂಕ್ತಿಯ
ಮೋಸವನರಿಯದ ಮುಗ್ಧರಿಗೆ
ತೋಷದಿ ಪರೀಕ್ಷೆ
ದಾಸರುವಿಟ್ಟರು
ಬೇಸರ ತೋರಿದ ಶಿಷ್ಯರಿಗೆ||

ಬಾಳೆಯ ಫಲವನು
ಕಾಳಗೆ ಕಾಣದೆ
ಕಾಳಜಿಯಿಂದಲಿ ಸವಿರೆಲ್ಲ
ಕಾಳನುವಿಲ್ಲದ್
ಸ್ಥಳವದುವಿಲ್ಲವು
ಹೇಳಿದ ಸುಂದರ ಜಗಮಲ್ಲ||

ಬಚ್ಚಮ ತನಯನು
ಕೆಚ್ಚೆದೆ ಶೂರನು
ಹೆಚ್ಚಿತು ಕೀರ್ತಿಯು ಮನೆತನದು
ರೊಚ್ಚಿಗೆ ಬರುವನು
ಚುಚ್ಚುತ ವೈರಿಯ
ಕೊಚ್ಚುತ ಚಣದಲಿ ಮಧಿಸುವನು||

ತಿಮ್ಮಪ್ಪ ವರನಿವ
ತಿಮ್ಮಪ್ಪ ನಾಯಕ
ಬಿಮ್ಮಿನ ಬೀರಪ್ಪ ಸುಪುತ್ರನು
ಸುಮ್ಮನೆ ಕೆಣಕುವ
ಹಮ್ಮಿನ ಹಗೆಗಿವ
ಗುಮ್ಮನ ತರದಲಿ ಕಾಡುವನು ||

ರಾಮನ ಧಾನ್ಯದ
ನೇಮವ ಪೊಗಳಿದ
ಧಮಯಂತಿ ನಳರ ಕೃತಿರಚಿಸಿ
ರಾಮನ ಭಕ್ತನು
ತಾಮಸ ಗುಣದವ
ನಾಮದಿ ಕನಕವ ನೀ ಗಳಿಸಿ||

ಶ್ರೀ ಈರಪ್ಪ ಬಿಜಲಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group