Homeಸುದ್ದಿಗಳುಧರ್ಮಸ್ಥಳದಲ್ಲಿ ಡಾ.ಮೇಖಲಗೆ ಪ್ರಶಂಸಾ ಪ್ರಶಸ್ತಿ 

ಧರ್ಮಸ್ಥಳದಲ್ಲಿ ಡಾ.ಮೇಖಲಗೆ ಪ್ರಶಂಸಾ ಪ್ರಶಸ್ತಿ 

     ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯ ವರ್ಜ್ಯ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ನವಜೀವನೋತ್ಸಾಹ ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಧರ್ಮಸ್ಥಳದಲ್ಲಿ ಮದ್ಯ ವರ್ಜಿಸಿದ ಜನರ  ಕುರಿತು ಅಧ್ಯಯನ ನಡೆಸಿದ ಡಾ.ಮೇಖಲಾ ರವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ.ಡಿ ವೀರೇಂದ್ರ ಹೆಗ್ಗಡೆರವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.
 ಮೂಲತಃ ಮೈಸೂರಿನ ಡಾ. ಮೇಖಲ ಮಂಗಳೂರಿನ ಕೆಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ವಿಶ್ವವಿದ್ಯಾಲಯದಲ್ಲಿ ಮನಃಶಾಸ್ತ್ರದ ಎಂಡಿ ಪದವಿ ವಿದ್ಯಾರ್ಥಿನಿಯಾಗಿದ್ದಾರೆ. ಬೆಂಗಳೂರಿನ ಶಿಶು ವೈದ್ಯ ಪತಿ ಡಾ. ಕಾರ್ತಿಕ್ ವಿ ಬಾದರಾಯಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
RELATED ARTICLES

Most Popular

error: Content is protected !!
Join WhatsApp Group