ಮೊಬೈಲ್ ನಿಂದಾಗಿ ಫೋಟೊಗ್ರಾಫರ್ ಗಳ ಬದುಕಿಗೆ ಬರೆ

Must Read

ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‌ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೇಸರ ವ್ಯಕ್ತಡಿಸಿದರು.

ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲೇ ಬಡಕುಟುಂಬದಿಂದ ತಮ್ಮ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಛಾಯಾಗ್ರಾಹಕರಾಗಿ ಉದ್ಯೋಗ ಮಾಡುವಂತ ಜನರು ಕಳೆದ ಮೂರು ವರ್ಷಗಳ ದಿಂದ ಕೊರೋನಾ ಸಂದರ್ಭದಲ್ಲಿ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಜನರೊಂದಿಗೆ ಉತ್ತಮವಾದ ಬಾಂಧವ್ಯದೊಂದಿಗೆ ಈ ವೃತ್ತಿಯನ್ನು ಗೌರವಿಸುವಂತಾಗಬೇಕೆಂದು ಹೇಳಿದರು.

ಇದೇ ವೇಳೆಯಲ್ಲಿ ತಾಲೂಕಿನ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಸಂಘದ ರಾಜ್ಯ ನಿರ್ದೇಶಕ ಮಲ್ಲಿಕಾರ್ಜುನ ಕಂಬಳಿ, ತಾಲೂಕಾಧ್ಯಕ್ಷ ಶಂಕರ ಹಾದಿಮನಿ, ಸುರೇಶ ರಜಪೂತ, ರವಿ ಜಾಧವ, ಪ್ರಕಾಶ ದೊಂಗಡಿ, ಮಹೇಶ ಭಸ್ಮೆ, ಮಧು ಗೌಡ, ರವಿ ಮಹಾಲಿಂಗಪೂರ ಹಾಗೂ ಅನೇಕರು ಉಪಸ್ಥಿತರಿದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group