ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಗೋಕಾಕ- ನಾಡಿನ ಮುಸ್ಲಿಂ ಜನತೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈದ್- ಮಿಲಾದ್ ಹಬ್ಬದ ಶುಭ ಕೋರಿದ್ದಾರೆ.

ಈ ದಿನ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯನ್ನು ಮೂಡಲು ಪ್ರವಾದಿಯವರು ನೀಡಿರುವ ಸಂದೇಶವನ್ನು ಪಾಲಿಸಿ ಅದರಂತೆ ಬದುಕಲು ಪ್ರಯತ್ನಿಸುವಂತೆ ಸಮಾಜದ ಬಾಂಧವರಿಗೆ ಮನವಿ ಮಾಡಿಕೊಂಡಿರುವ ಅವರು, ಮುಸ್ಲಿಂ ಸಮಾಜದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಬದ್ಧವಿದೆ. ಮುಸ್ಲಿಂ ಸಮುದಾಯದ ಉನ್ನತಿ, ಪ್ರಗತಿ ಮತ್ತು ಅವರ ಆರ್ಥಿಕ ಅಭ್ಯುದಯಕ್ಕಾಗಿ ನಮ್ಮ ಕೇಂದ್ರ ಸರ್ಕಾರ ಹಲವು ಮಹತ್ತರ
ಕಾರ್ಯಕ್ರಮಗಳನ್ನು ರೂಪಿಸಿದೆ. ಸಾಮರಸ್ಯ ಬದುಕನ್ನು ಅನುಸರಿಸುವ ಮೂಲಕ ಪರಸ್ಪರ ಸಹೋದರತ್ವ ಮನೋಭಾವನೆಯಿಂದ ಬದುಕುವಂತೆಯೂ ಅವರು ಮುಸ್ಲಿಂ ಸಮಾಜದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈದ್ ಮಿಲಾದ ಹಬ್ಬವು ಮುಸ್ಲಿಂ ಬಾಂಧವರಿಗೆ ಎಲ್ಲ ರೀತಿಯಿಂದಲೂ ಒಳ್ಳೆಯದು ಆಗಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಶಿಸಿದ್ದಾರೆ.

1 COMMENT

  1. ಈ ಯಪ್ಪ ಯಾವ ಹಿಂದೂ ಹಬ್ಬಗಳಿಗೆ ಶುಭಾಷಯಗಳು ಹೇಳಿದ್ದಾರೆ??

Comments are closed.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group