spot_img
spot_img

ಸಿಂದಗಿ ನಗರವನ್ನು ಸುಂದರವಾಗಿಸುವ ಗುರಿ ಇದೆ – ಮನಗೂಳಿ

Must Read

- Advertisement -

ಸಿಂದಗಿ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಅವರು ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಉಪವಿಭಾಗ ಸಿಂದಗಿ 2023 -24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ. ಕಾಗಿ ಅವರ ಮನೆಯವರೆಗೆ ಅಂದಾಜು ರೂ. 20 ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರ ಅಭಿವೃದ್ದಿಯಾಗಲು ಮೊದಲು ರಸ್ತೆಗಳು ಉತ್ತಮವಾಗಿರಬೇಕು. ಮುಂಬರುವ ದಿನಗಳಲ್ಲಿ ಸಿಂದಗಿಗೆ ಪಟ್ಟಣದ ಎಲ್ಲ ವಾರ್ಡುಗಳ ರಸ್ತೆಗಳನ್ನು ಹಾಗೂ ಮುಖ್ಯ ರಸ್ತೆಗಳನ್ನು ಅಭಿವೃದ್ದಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.

- Advertisement -

ಈ ವೇಳೆ ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ, ಸದಸ್ಯರಾದ ಹಸೀಮ್ ಆಳಂದ, ರಾಜು ಖೇಡ್, ಸೈಫನ್ ನಾಟಿಕಾರ್, ಮಾಜಿ ಸದಸ್ಯರಾದ ಇಕಬಾಲ್ ತಲಕಾರಿ, ರಹೀಮ್ ಮರ್ತುರ, ಮೈಬುಬ್ ಮರ್ತುರ್, ಕಾಂಗ್ರೆಸ್ ಮುಖಂಡ ಅಶೋಕ್ ವಾರದ್, ಶರಣು ಶ್ರೀಗಿರಿ, ರಾಜಶೇಖರ ಸಂಗಮ್, ಗುರು ತಾರಾಪುರ, ಶಿವಾನಂದ ಅರಲಗುಂದಗಿ, ಮುತ್ತು ಅರಳಗುಂಡಗಿ, ವೀರೇಶ್ ವಸ್ತ್ರದ, ಶಾಂತಪ್ಪ ರಾಣಾಗೋಳ, ಸೇರಿದಂತೆ ಅನೇಕರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ದಸರಾ ಕ್ರೀಡಾಕೂಟ: ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೈಲಹೊಂಗಲ: 2024-25 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಲಕ್ಷ್ಮಿ...
- Advertisement -

More Articles Like This

- Advertisement -
close
error: Content is protected !!
Join WhatsApp Group