ಲಿಂ. ಚೆನ್ನವೀರ ಮಹಾಸ್ವಾಮಿಗಳ ೧೩೧ ನೇ ಜಯಂತ್ಯುತ್ಸವ ನ. ೧೩ ರಿಂದ

Must Read

ಸಿಂದಗಿ- ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ ೧೩೧ ನೇ ಜಯಂತ್ಯುತ್ಸವ ನಿಮಿತ್ತ ನವಂಬರ್ ೧೩ ರಿಂದ ಡಿಶೆಂಬರ್ ೩ ರ ವರೆಗೆ ಸುಮಾರು ೨೧ ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗುವವು ಎಂದು ಸಾರಂಗಮಠದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ಪಟ್ಟಣದ ಸಾರಂಗಮಠದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪ್ರತಿನಿತ್ಯ ಸಂಜೆ ೬.೩೦ ಗಂಟೆಗೆ ಉಜ್ಜಯನಿಯ ಲಿಂ ಶ್ರೀ ಸಿದ್ದಲಿಂಗ ಶಿವಾಚಾರ್ಯರ ಪುರಾಣ -ಪ್ರವಚನವನ್ನು ಶಾಪೂರದ ಶ್ರೀ ಸೂಗೂರೇಶ್ವರ ಶ್ರೀಗಳಿಂದ ನೆರವೇರುವುದು. ಲಿಂ ಶ್ರೀ ಚನ್ನವೀರ ಮಹಾಸ್ವಾಮಿಗಳ ಜಯಂತಿ ದಿನವಾದ ನ.೧೮ ರಂದು ತಾಲೂಕಿನ ಶ್ರೇಷ್ಠ ಕೃಷಿಕರಿಗೆ ನೀಡುವ ಸಾರಂಗ ಶ್ರೀ ಕೃಷಿ ಪ್ರಶಸ್ತಿಯನ್ನು ಆಲಮೇಲದ ಸಾವಯವ ಕೃಷಿಕ ಸುನೀಲ ನಾರಾಯಣಕರ ಅವರಿಗೆ ಪ್ರಶಸ್ತಿ ಫಲಕ ಮತ್ತು ೧೧ ಸಾವಿರ ನಗದನ್ನು ನೀಡಿ ಗೌರವಿಸಲಾಗುವುದು.

ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ-೨ ಅವರ ಸ್ಮರಣೆಗಾಗಿ ನೀಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿಯನ್ನು ನ.೨೫ ರಂದು ಅಂತಾರಾಷ್ಟ್ರೀಯ ಕೃಷಿ ತತ್ಞ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ ನಿರ್ದೇಶಕ, ಪದ್ಮಶ್ರೀ ಸುಬ್ಬಯ್ಯ ಅಯ್ಯಪ್ಪನ್ ಅವರಿಗೆ ಭಾಸ್ಕರ ಪ್ರಶಸ್ತಿ ಮತ್ತು ೧ ಲಕ್ಷ ನಗದನ್ನು ನೀಡಿ ಗೌರವಿಸಲಾಗುವುದು. ಈ ಹಿಂದೆ ದೇಶದ ಖ್ಯಾತ ವಿಜ್ಞಾನಿಗಳಾದ ಸಿ.ಎನ್.ರಾವ್, ಯು.ಆರ್.ರಾವ್, ಡಾ. ಎ.ಎಸ್.ಪಾಟೀಲ, ಕೆ.ಕಸ್ತೂರಿರಂಗನ್, ಇಸ್ರೊ ಮಾಜಿ ಅಧ್ಯಕ್ಷ ಡಾ.ಕಿರಣಕುಮಾರ ಅವರಿಗೆ ನೀಡಿ ಗೌರವಿಸಿದೆ.
ನ.೨೭ ರಂದು ಸಿದ್ದಾಂತ ಶಿಖಾಮಣಿ ಕರ್ತೃ ಸಾಲೋಟಗಿ ಶ್ರೀ ಶಿವಯೋಗಿ ಶಿವಾಚಾರ್ಯರ ಸ್ಮರಣೆಯಲ್ಲಿ ನೀಡುವ ಶಿವಯೋಗಿ ಶಿವಾಚಾರ್ಯ ಪ್ರಶಸ್ತಿಯನ್ನು ಮಡಕೇರಿಯ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಿ.ಶಿವಕುಮಾರಸ್ವಾಮಿ ಅವರಿಗೆ ಪ್ರಶಸ್ತಿ ಮತ್ತು ೧ ಲಕ್ಷ ನಗದು ನೀಡಿ ಗೌರವಿಸಲಾಗುವುದು.

ಡಿ.೨ ರಂದು ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಕಲ್ಯಾಣಮಹೋತ್ಸವ ಮತ್ತು ಡಿ.೩ ರಂದು ಶ್ರೀ ವೀರಭದ್ರ ದೇವರ ಮತ್ತು ಭದ್ರಕಾಳಿ ಅಮ್ಮನವರ ಮೂರ್ತಿಯನ್ನು ಬೆಳ್ಳಿ ರಥದೊಂದಿಗೆ ಮಹಿಳೆಯರೆ ಎಳೆಯುವ ಮೂಲಕ ಜಾತ್ರಾ ಮಹೋತ್ಸವ ನಡೆಯಲಿದೆ. ಅಂದು ಪುರಾಣ ಪ್ರವಚನ ಮುಕ್ತಾಯ ಸಮಾರಂಭ ನೆರವೇರುವುದು. ಕಾರಣ ಸಿಂದಗಿಯ ಸದ್ಬಕ್ತ ಮಂಡಳಿ ಶ್ರೀಮಠದಲ್ಲಿ ಜರುಗುವ ಎಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಸಾರಂಗ ಶ್ರೀಗಳು ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಕೊಣ್ಣೂರಿನ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಅಶೋಕ ವಾರದ, ಡಾ.ಶರಣಬಸವ ಜೋಗೂರ ಇದ್ದರು.

Latest News

ಬಸವಕಲ್ಯಾಣ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಹೈಡ್ರಾಮಾ

ಕಾಂಗ್ರೆಸ್ ಕೌನ್ಸಿಲರ್‌ಗಳ ಮಧ್ಯೆ ಗಲಾಟೆಬೀದರ - ಬಸವಕಲ್ಯಾಣ ನಗರದಲ್ಲಿ ಟಿಪ್ಪು ಸುಲ್ತಾನ್ ಚೌಕ ನಾಮಕರಣ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರ ನಡುವೆ ಗಲಾಟೆ ಉಂಟಾಗಿ ಕೈ ಕೈ...

More Articles Like This

error: Content is protected !!
Join WhatsApp Group