ಅಗಲಿದ ರತನ್ ಟಾಟಾ ; ಶಾಸಕ ಬಾಲಚಂದ್ರ ಸಂತಾಪ

Must Read

ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ
ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ ಸಮೂಹವನ್ನು ಜಾಗತಿಕವಾಗಿ ಉದ್ಯಮವನ್ನು ಮಾಡಿರುವ ಶ್ರೇಯಸ್ಸು ಟಾಟಾ ಅವರಿಗೆ ಸಲ್ಲುತ್ತದೆ. ಟಾಟಾ ಅವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.

Latest News

ಲೇಖನ : ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರ

ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರಾಮ ಚರಿತ ಕಥಾಮೃತವಾದ ರಾಮಾಯಣ, ಶ್ರೀರಾಮನನ್ನು ಮರ್ಯಾದ ಪುರುಷೋತ್ತಮ ಎಂದು ಬಿಂಬಿಸಿದೆ. ಹಾಗೆಂದ್ರೆ ತನ್ನ ಜೀವಮಾನದಲ್ಲಿ ನೀತಿ ಹಾಗೂ ತತ್ವ ಬದ್ಧವಾಗಿ...

More Articles Like This

error: Content is protected !!
Join WhatsApp Group