ವಿಶೇಷ ಉಪನ್ಯಾಸ ಹಾಗೂ ಪ್ರಶಸ್ತಿ ಪ್ರದಾನ ೩೦ ರಂದು ಸಂಗಮ ಸಾಹಿತ್ಯ ಸಂಭ್ರಮ

Must Read

ಹುನಗುಂದ: ನಗರದ ಸಂಗಮ ಪ್ರತಿಷ್ಠಾನದ ಸಂಗಮ ಸಾಹಿತ್ಯ ಸಂಭ್ರಮ ವಾರ್ಷಿಕ ಕಾರ್ಯಕ್ರಮ ಇದೇ ೩೦ ರಂದು ಶನಿವಾರ ಮದ್ಯಾಹ್ನ ೧೨ ಕ್ಕೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವುದು.

ಹಿರಿಯ ವಕೀಲ ಕೆ.ಎಂ. ಸಾರಂಗಮಠ ಅಧ್ಯಕ್ಷತೆ ವಹಿಸುವರು. ಬಾಗಲಕೋಟೆ ಕವಿ ಹಾಗೂ ವಿಮರ್ಶಕ ಡಾ.ಮೈನುದ್ದೀನ ರೇವಡಿಗಾರ ‘ಹಳಗನ್ನಡ ಓದು-ಒಲವು’ ವಿಷಯ ಕುರಿತು ಉಪನ್ಯಾಸ ನೀಡುವರು. ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಸಿಡಿಸಿ ಉಪಾಧ್ಯಕ್ಷ ಮಹಾಂತೇಶ ಪರೂತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ, ಕಸಾಪ ತಾಲೂಕ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಮುಖ್ಯ ಅತಿಥಿಗಳಾಗಿರುವರು.

ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಎಂ.ಆರ್.ಇದ್ದಲಗಿ ಮತ್ತು ಶಿವರುದ್ರಪ್ಪ ಮೆಣಸಿನಕಾಯಿ ಅವರಿಗೆ ಸಂಗಮ ಪ್ರಶಸ್ತಿ ಹಾಗೂ ಯುವ ಲೇಖಕ ಪ್ರಶಸ್ತಿ ಕೊಟ್ಟು ಗೌರವಿಸಲಾಗುವುದು ಎಂದು ಸಂಗಮ ಪ್ರತಿಷ್ಠಾನ ಹಾಗೂ ಸಾಹಿತ್ಯ ಸಮಾವೇಶ ಸಂಚಾಲಕ ಎಸ್ಕೆ ಕೊನೆಸಾಗರ ಮತ್ತು ಕನ್ನಡ ಲೇಖಕರ ಪರಿಷತ್ ಅಧ್ಯಕ್ಷ ಡಾ.ಮುರ್ತುಜಾ ಒಂಟಿ ತಿಳಿಸಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group