ಅಕ್ರಮವಾಗಿ ಸಾಗಿಸುತ್ತಿದ್ದ ರಕ್ತ ಚಂದನ ವಶ

Must Read

ಬೀದರ – ಬೀದರ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಭರ್ಜರಿ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೊಬ್ಬರಿ ೧೬ ಲಕ್ಷ ಮೌಲ್ಯದ ಶ್ರೀಗಂಧವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ ಬಂಗ್ಲಾ ಬಳಿ ಈ ಘಟನಡ ನಡೆದಿದ್ದು ಈ ಸಂಬಂಧ ತೆಲಂಗಾಣ ಮೂಲದ ಪಿ ಕೆ ಬದ್ರುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ.
ಗೂಡ್ಸ್ ವಾಹನದಲ್ಲಿ ಮುಂಬೈ ನಗರಕ್ಕೆ ಅಕ್ರಮವಾಗಿ ರಕ್ತಚಂದನವನ್ನು ಸಾಗಿಸಲಾಗುತ್ತಿತ್ತು. ಗಾಡಿಯ ತಳದ ಇನ್ನೊಂದು ಪದರಿನಲ್ಲಿ ಶ್ರೀಗಂಧದ ತುಣುಕುಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದ ವಾಹನವನ್ನು ಪರಿಶೀಲಿಸಿದಾಗ ಸುಮಾರು ೧೬ ಲಕ್ಷ ಮೌಲ್ಯದ ಶ್ರೀಗಂಧ ಸಿಕ್ಕಿದೆ.

ವಾಹನ ಹಾಗು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group