ಮೊಮ್ಮಗನ ಬರ್ಥಡೆ ಮುಗಿಸಿ ಬರುವಷ್ಟರಲ್ಲಿ ಮನೆ ದೋಚಿದ್ದರು

Must Read

ಬೀದರ – ನಗರದ ಹೃದಯಭಾಗದಲ್ಲಿಯೇ ಕೆಚ್ ಬಿ ಕಾಲನಿಯಲ್ಲಿ ಇದ್ದ ಅಮೃತ ಸೂರ್ಯವಂಶಿ ಎಂಬುವವರ ಮನೆ ಕಳ್ಳತನವಾಗಿದ್ದು ಕಳ್ಳರು ಮನೆಯನ್ನೆಲ್ಲ ಜಾಲಾಡಿ ಹಣ ಒಡವೆ ಕದ್ದೊಯ್ದಿದ್ದಾರೆ.

ಮೊಮ್ಮಗನ ಹುಟ್ಟು ಹಬ್ಬಕ್ಕೆಂದು ೧೧ ದಿನಗಳ ಕಾಲ ಕೊಯಿಮುತ್ತೂರಿಗೆ ತೆರಳಿದ್ದ ಕುಟುಂಬಸ್ಥರು ಬಂದು ನೋಡುವಷ್ಟರಲ್ಲಿ ಶಾಕ್ ಗೆ ಒಳಗಾಗಿದ್ದಾರೆ. ಮನೆಯಲ್ಲಿದ್ದ ೩೦ ಗ್ರಾಂ. ಬಂಗಾರದ ಆಭರಣಗಳು, ೨೫ ಸಾವಿರ ಹಣವನ್ನೂ ಖದೀಮರು ದೋಚಿದ್ದಾರೆ. ಸಂಘದಿಂದ ತಂದಿದ್ದ ಹಣ ಕಳುವಾಗಿದ್ದಕ್ಕೆ ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಖದೀಮರ ಹುಡುಕಾಟದಲ್ಲಿ ತೊಡಗಿದ್ದಾರೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group