ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಕಠಿಣ ಕ್ರಮಕ್ಕೆ ಆಗ್ರಹ

Must Read

ಬೀದರ – ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ ಭಾವಚಿತ್ರಕ್ಕೆ ಯಾರೋ ಕಿಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಪ್ರಸಂಗದಿಂದಾಗಿ ಕೆಲಹೊತ್ತು ಉಧ್ವಿಘ್ನ ಪರಿಸ್ಥಿತಿ ಎದುರಾಗಿತ್ತು.

ಬೀದರ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ತಕ್ಷಣವೇ ಜಿಲ್ಲಾ ಎಸ್ ಪಿ ಪ್ರದೀಪ ಗುಂಟಿಯವರು ಸ್ಥಳಕ್ಕೆ ಭೇಟಿ ನೀಡಿ ಹಾರ ತೆರವುಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ತಡರಾತ್ರಿ ಯಾರೂ ದುಷ್ಕರ್ಮಿಗಳು ಈ ದುಷ್ಕೃತ್ಯ ಕೈಗೊಂಡಿದ್ದು ಸ್ಥಳಕ್ಕೆ ಜನವಾಡ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ಘಟನೆಯಿಂದ ಗ್ರಾಮದ ದಲಿತ ಪರ ಸಂಘಟನೆಗಳು ಆಕ್ರೋಶಗೊಂಡಿದ್ದು ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group