ಜೀವನ್ ಬಿಮಾ ಯೋಜನೆಯಡಿ ರೂ. ೭೭ ಕೋಟಿ ಪರಿಹಾರ – ಈರಣ್ಣ ಕಡಾಡಿ

Must Read

ಬೆಳಗಾವಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ 8.37 ಲಕ್ಷ ಜನರು ನೊಂದಣಿಯಾಗಿದ್ದು, ಅದರಲ್ಲಿ 3884 ಫಲಾನುಭವಿಗಳಿಗೆ 77.68 ಕೋಟಿ ರೂ.ಗಳ ವಿಮಾ ಮೊತ್ತದ ಪರಿಹಾರ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ ಚೌಧಿರಿ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಕರ್ನಾಟಕ ರಾಜ್ಯ ಹಾಗೂ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಯೋಜನ ಪಡೆದ ಫಲಾನುಭವಿಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆಳಗಾವಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 16.23 ಲಕ್ಷ ಜನರು ನೊಂದಣಿಯಾಗಿದ್ದು, ಅದರಲ್ಲಿ 500 ಫಲಾನುಭವಿಗಳಿಗೆ 10 ಕೋಟಿ ರೂ.ಗಳ ವಿಮಾ ಮೊತ್ತದ ಪರಿಹಾರ ನೀಡಲಾಗಿದೆ ಹಾಗೂ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಜಿಲ್ಲೆಯಲ್ಲಿ 21.17 ಲಕ್ಷ ಜನರು ನೊಂದಣಿಯಾಗಿದ್ದಾರೆ ಎಂದರು.

ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ 1 ಕೋಟಿ 39 ಲಕ್ಷ ಜನರು ನೊಂದಣಿಯಾಗಿದ್ದು, ಅದರಲ್ಲಿ 57116 ಫಲಾನುಭವಿಗಳಿಗೆ 1142.32 ಕೋಟಿ ರೂ.ಗಳ ವಿಮಾ ಮೊತ್ತದ ಪರಿಹಾರ ನೀಡಲಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 2 ಕೋಟಿ 15 ಲಕ್ಷ ಜನರು ನೊಂದಣಿಯಾಗಿದ್ದು, ಅದರಲ್ಲಿ 5767 ಫಲಾನುಭವಿಗಳಿಗೆ 115.34 ಕೋಟಿ ರೂ.ಗಳ ವಿಮಾ ಮೊತ್ತದ ಪರಿಹಾರ ನೀಡಲಾಗಿದೆ ಹಾಗೂ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ 1 ಕೋಟಿ 98 ಲಕ್ಷ ಜನರು ನೊಂದಣಿಯಾಗಿದ್ದಾರೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group