ಅಪ್ರಾಪ್ತೆಯೊಂದಿಗೆ ಲವ್ ; ಕೊಲೆಯಲ್ಲಿ ಅಂತ್ಯ…

Must Read

ಬೀದರ – ಮೇಲ್ಜಾತಿಯ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪ್ರಕರಣ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ತಾಲೂಕಿನ ಬೆಡಕುಂದಾ ಗ್ರಾಮದ ಸುಮಿತ್(19) ಎಂಬಾತನೆ ಹುಡುಗಿಯ ಕುಟುಂಬಸ್ಥರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಇಂದು ಕೊನೆಯುಸಿರು ಎಳೆದಿರುವ ದುರ್ದೈವಿ.

ಪಕ್ಕದ ಊರಿನ ಅಪ್ರಾಪ್ತೆ ಅದರಲ್ಲೂ ಮೇಲ್ಜಾತಿಯ ಹುಡುಗಿಯನ್ನು ಸುಮಿತ್ ಪ್ರೀತಿಸುತ್ತಿದ್ದ ಇದರಿಂದ ಕೋಪಗೊಂಡ ಹುಡುಗಿಯ ಅಣ್ಣ ರಾಹುಲ್ ಹಾಗೂ ತಂದೆ ಕಿಶನರಾವ್ ಇಬ್ಬರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುಮಿತನನ್ನು ಮಹಾರಾಷ್ಟ್ರದ ಲಾತೂರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಿತ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಈ ಕುರಿತು ಆರೋಪಿ ರಾಹುಲ್ ಹಾಗೂ ಕಿಶನರಾವ ಇಬ್ಬರನ್ನು ಬಂಧಿಸಿರುವ ಠಾಣಾಕುಶನೂರ ಪೊಲೀಸರು ಜಾತಿ ನಿಂದನೆ ಹಾಗೂ ಕೊಲೆ ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ‌ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group