ವಾಹನಗಳ ಮೇಲೆ  ಪ್ರೆಸ್ ಪದ ದುರ್ಬಳಕೆ ಬಗ್ಗೆ ಎಸ್‌ಪಿ ಗೆ ಮನವಿ, ಶೀಘ್ರವೇ ಪತ್ರಕರ್ತರಿಗೆ ಪೋಲಿಸ್ ಕಾರ್ಡ ವಿತರಣೆ ಭರವಸೆ

Must Read

ಬೀದರ:-  ವಾಹನಗಳ ಮೇಲೆ ಪ್ರೆಸ್ ಪದ  ಬರೆಸಿ ಅತಿ ದುರ್ಬಳಕೆ ಆಗುತ್ತಿರುವುದು ಇದರಿಂದ ಪತ್ರಕರ್ತರಿಗೆ ಅನೇಕ ಸಲ ಮುಜುಗರ ಉಂಟಾಗುತ್ತಿದೆ. ಹೀಗಾಗಿ ಇದನ್ನು ತಡೆಗಟ್ಟಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ನಿಯೋಗ ಪೋಲಿಸ್ ವರಿಷ್ಠಾಧಿಕಾರಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಪತ್ರಕರ್ತರಲ್ಲದವರು ಸಹ ದ್ವಿಚಕ್ರ ಹಾಗೂ ಕಾರು ಸೇರಿದಂತೆ ಇತರ ವಾಹನಗಳ ಮೇಲೆ ಪ್ರೆಸ್ ಪದ ಬಳಸುತ್ತಿರುವುದು ಕಂಡು ಬಂದಿದ್ದು ಅನೇಕ ಸಲ ಪತ್ರಕರ್ತರಿಗೆ ಹಾಗೂ ಪೋಲಿಸರಿಗೂ ಸಹ ನಿಜವಾದ ಪತ್ರಕರ್ತರ ಬಗ್ಗೆ ತಿಳಿಯದೇ ಕ್ರಮ ಜರುಗಿಸುವುದರ ಬಗ್ಗೆ ಹಿಂದೇಟು ಹಾಕುತ್ತಿದ್ದರು. ಪತ್ರಕರ್ತರಿದ್ದವರನ್ನು ಮಾತ್ರ ಗುರುತು ಮಾಡಿ ಉಳಿದಂತಹ ವಾಹನಗಳನ್ನು ಪತ್ತೆ ಹಚ್ಚಿ ದಂಡ  ವಿಧಿಸಬಹುದೆಂದು ಮನವಿ ಪತ್ರದಲ್ಲಿ ತಿಳಿಸಿದ್ದೆವು. ಇದಕ್ಕೆ ಸ್ಪಂದಿಸಿದ ಪೋಲಿಸ್ ವರಿಷ್ಠಾಧಿಕಾರಿಗಳು ೨-೩ ದಿನದಲ್ಲಿ ಪತ್ರಕರ್ತರ ವಾಹನಗಳಿಗೆ ಕಾರ್ಡ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು ಮತ್ತು ಪತ್ರಕರ್ತರಲ್ಲದವರ ವಾಹನಗಳನ್ನು ತಪಾಸಣೆ ಮಾಡಿ ದಂಡ ವಿಧಿಸಲಾಗುವುದೆಂದು ಭರವಸೆ ನೀಡಿದರು.

ಈ ಬಗ್ಗೆ ಪೋಲಿಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು ಪತ್ರಕರ್ತರು ಮತ್ತು ಪೋಲಿಸ್ ಅಧಿಕಾರಿಗಳ ಮಧ್ಯೆ ಸಮನ್ವಯ ಮತ್ತು ಪರಸ್ಪರ ಸಹಕಾರದ ಭಾವನೆ ಇರಬೇಕೆಂದು ಪೋಲಿಸ್ ಅಧಿಕಾರಿಗಳ ಚರ್ಚೆ ಮಾಡಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಘ ಕಾನೂನಾತ್ಮಕ ಹಾಗೂ ಪೋಲಿಸರಿಗೆ ಯಾವಾಗಲೂ ಬೆಂಬಲವಾಗಿ ನಿಲ್ಲುವುದಾಗಿ ಹೇಳಲಾಗಿದೆ.

ಪತ್ರಕರ್ತರು ಸಹ ಸರಿಯಾದ ಮಾಹಿತಿ ಪಡೆದು ಸಮಯಕ್ಕೆ ಸರಿಯಾಗಿ ಜನರಿಗೆ ಸುದ್ದಿ ಮುಟ್ಟಿಸಿದರೆ ಸೂಕ್ತವಾಗುವುದು. ಯಾಕೆಂದರೆ ಮಾಧ್ಯಮ ಸುದ್ದಿ ಜನರು ನಂಬಿರುತ್ತಾರೆ. ಹೀಗಾಗಿ ಜನರಿಗೆ ನಂಬಿಕೆ ಬರುವ ರೀತಿಯಲ್ಲಿ ಸುದ್ದಿ ಬಿತ್ತರಿಸುವ ಬಗ್ಗೆ ಔಪಚಾರಿಕ ಚರ್ಚೆ ನಡೆಯಿತು. ಪೋಲಿಸರು ಯಾವಾಗಲೂ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಅವರಿಗೆ ನಾವು ಸದಾ ಬೆಂಬಲದಲ್ಲಿರುತ್ತೇವೆ ಎಂಬ ಭರವಸೆ ಈ ಸಂದರ್ಭದಲ್ಲಿ  ಸಂಪಾದಕರ ಸಂಘ ನೀಡಿತು.

ನಿಯೋಗದಲ್ಲಿ ಸಂಪಾದಕರ ಸಂಘದ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ಮತ್ತು ಹಿರಿಯ ಪತ್ರಕರ್ತರಾದ ಸೈಯದ್ ಹಸನ್ ಖಾದ್ರಿ, ಅಬ್ದುಲ್ ಅಲಿ, ಪ್ರದೀಪ ಬಿರಾದಾರ, ನಂದಕುಮಾರ, ಸುನೀಲ ಕುಲಕರ್ಣಿ, ಸ್ವಾಮಿದಾಸ ಯೇಸುದಾಸ ನಾಗೂರೆ, ಜೈಕುಮಾರ ಹಾಗೂ ಸುಧಾರಾಣಿ ಸೇರಿ ಹಲವರು ಹಾಜರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group