ಕವನ : ಶುಭೋದಯ

Must Read

ಶುಭೋದಯ

ಚಂದನವನದ
ಶುಭೋದಯದಲಿ
ಮೂಡಿಬಂದಿರಿ ನೀವು
ಅಗಾಧ ವ್ಯಕ್ತಿತ್ವದ
ಮೇರುಪರ್ವತದ ನಿಲುವಿನಲಿ
ವಚನದಾರ್ಶನಿಕರಾಗಿ
ಎಲ್ಲರ ಮನ ಮುಟ್ಟಿದಿರಿ
ಇಂದು

ತಿಳಿಹೇಳಿದಿರಿ ಔಷಧಿ
ಆರೋಗ್ಯ ಕೃಷಿಯ ಕುರಿತು
ಮನನಮಾಡಿಸಿದಿರಿ
ವಚನಸಾರದ ಒಳಾರ್ಥಗಳ
ಹೆಮ್ಮೆಯಿಂದ ಹಂಚಿಕೊಂಡಿರಿ
ಅಕ್ಕನ ಅರಿವಿನ ಉಪನ್ಯಾಸಗಳ
ಅದಕ್ಕಾಗಿ ದುಡಿವವರ ಹೆಸರುಗಳ

ಕವಿಯಾಗಿ ಕುವೆಂಪು ಅವರ
ನೆನಪಿಸುತ್ತಾ
ನಿಸರ್ಗಪ್ರೇಮಿಯಾಗಿ
ಪ್ರಾಣಿ -ಪಕ್ಷಿ ಸಂಕುಲವನ್ನು
ಪ್ರೀತಿಸುವುದ ಅರುಹಿದಿರಿ

ಭಾವುಕರಾದಿರಿ
ಅವ್ವನ ಮಾತೃ ಹೃದಯವನ್ನು
ತಂದೆಯ ಕಳಕಳಿಯ
ನೆನೆದು
ಅಭಿಮಾನದಿಂದ ಹೇಳಿದಿರಿ
ಧರ್ಮಪತ್ನಿಯ
ಸಹಕಾರ ಮನೋಭಾವವ

ಮೂಡಿಬಂದಿರಿ
ಶುಭೋದಯದಲಿ ಇಂದು
ನಮ್ಮೆಲ್ಲರ ಹೆಮ್ಮೆಯ
ಮಾರ್ಗದರ್ಶಕರಾಗಿ
ಬುದ್ಧ -ಬಸವ – ಅಂಬೇಡ್ಕರರ
ಶರಣತತ್ವದ ನಿಜವಾದ ಹರಿಕಾರರಾಗಿ

ಸುಧಾ ಪಾಟೀಲ
ಬೆಳಗಾವಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group