ಶಾಲಾ ಅಂಗಳದಲ್ಲಿ ಮಕ್ಕಳ ಅಪರೂಪದ ‘ ಮಕ್ಕಳ ಸಂತೆ’ ಕಾರ್ಯಕ್ರಮ

Must Read

ಮೂಡಲಗಿ -ತಾಲೂಕಿನ ಹಳ್ಳೂರ ಗ್ರಾಮದ ತೋಟದ ಸರ್ಕಾರಿ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ/ಮಕ್ಕಳಿಗೆ ಸಾಮಾನ್ಯ ಜ್ಞಾನದ ಅರಿವು ಮೂಡಿಸುವ ಸಲುವಾಗಿ “ಸಂತೆ” ಕಾರ್ಯಕ್ರಮ ಜರುಗಿತು.

ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಳ್ಳೂರ ಕ್ರಾಸ್, ತೋಟದ ಶಾಲೆಯಲ್ಲಿ ಮಕ್ಕಳಲ್ಲಿನ ವ್ಯಾವಹಾರಿಕ ಜ್ಞಾನದ ವೃದ್ಧಿಗಾಗಿ ಮಕ್ಕಳ ಹಳ್ಳಿ ಸಂತೆಯನ್ನ ಏರ್ಪಡಿಸಲಾಗಿತ್ತು.

ಹಿರಿಯರಾದ ಬಾಬು ಪಾ. ಸಪ್ತಸಾಗರ ಮತ್ತು ಎಸ್‌ಡಿಎಂಸಿ ಅಧ್ಯಕ್ಷರಾದ ಎಸ್. ಬಿ. ಗೊರಗುದ್ದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಪಾಠದ ಜೊತೆಗೆ ಪಠ್ಯೇತರ ಹಾಗೂ ವ್ಯಾವಹಾರಿಕ ಜ್ಞಾನಕ್ಕೆ ಒತ್ತು ಕೊಡುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಾಧ್ಯ ಎಂದು ಹೇಳಿದರು.

ಶಿಕ್ಷಕರು ನಮ್ಮ ಶಾಲೆಯಲ್ಲಿ ಈ ರೀತಿ ವಿಭಿನ್ನ ಕಾರ್ಯಕ್ರಮಗಳನ್ನ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಶಾಲೆಯ ಪ್ರಧಾನ ಗುರುಗಳಾದ ಬಿ. ಪಿ. ಪಾಟೀಲ ರವರು ಶಿಕ್ಷಣದೊಂದಿಗೆ ನೈಜ ವ್ಯಾವಹಾರಿಕ ಜ್ಞಾನ ಬೆಳೆಯಲು ಮಕ್ಕಳ ಸಂತೆ ಕಾರ್ಯಕ್ರಮ ಸಹಕಾರಿಯಾಗಿದೆ ಮತ್ತು ಇದು ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾದ ಕಾರ್ಯಕ್ರಮವಾಗಿದೆ. ಆಟ-ಪಾಠ ಜೊತೆಯಲ್ಲಿ ಸಾಮಾನ್ಯ ಜ್ಞಾನ ನೀಡುವುದು ಮಕ್ಕಳಲ್ಲಿ ಉತ್ಸಾಹ ಮತ್ತು ಜ್ಞಾನವು ಹೆಚ್ಚುವುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಎಲ್ಲ ಕ್ಷೇತ್ರದಲ್ಲಿ ಸಜ್ಜುಗೊಳಿಸುವ ಅಗತ್ಯವಿದೆ ಮತ್ತು ಮಕ್ಕಳು ಈ ಕಾರ್ಯಕ್ರಮದಲ್ಲಿ ಅತಿ ಉತ್ಸಾಹದಿಂದ ತೊಡಗಿಕೊಂಡಿದ್ದು ತುಂಬಾ ಸಂತಸ ತಂದಿದೆ ಎಂದರು.

ಎಲ್ಲರ ಮನಸೂರೆಗೊಂಡ ಮಕ್ಕಳ ಸಂತೆ ಮಕ್ಕಳಲ್ಲಿನ ಸಂವಹನ ಮತ್ತು ವ್ಯವಹಾರಿಕ ಕೌಶಲ್ಯ ಹೆಚ್ಚಿಸುವ ಉದ್ದೇಶದಿಂದ ಸ್ವ- ಅನುಭವ ನೀಡುವ ಈ ಸಂತೆಯು ನೋಡುಗರ ಮನಸ್ಸನ್ನು ಸೆಳೆಯಿತು . ಮಕ್ಕಳು ವಿಶೇಷ ಉಡಿಗೆಗಳೊಂದಿಗೆ ಹೊಲದಲ್ಲಿ ಬೆಳೆದ ವಿವಿಧ ತರಕಾರಿ, ಹಣ್ಣು ಹಂಪಲ, ದಿನಸಿ ಕಾಳುಗಳು, ವಿಶೇಷವಾದ ತಿಂಡಿ ತಿನಿಸುಗಳಾದ, ಬೇಲ್‍ಪುರಿ, ಬೋಂಡಾ ಬಜ್ಜಿ, ಕಾಫಿ, ಟೀ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.ಪರಸ್ಪರ ಸ್ವರ್ಧಾ ಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಾಪಾರ ಮಾಡಬೇಕು ಎಂಬ ಛಲದಿಂದ ಪೋಷಕರನ್ನು ಕರೆದು ತಮ್ಮ ಸಾಮಗ್ರಿ ಖರೀದಿಸಲು ಒತ್ತಾಯಿಸುತ್ತಿದ್ದರು. ಪಾಲಕರು ಶಿಕ್ಷಕರು ಅತಿ ಉತ್ಸಾಹದಿಂದ ಮಕ್ಕಳು ಸಂತೆಯಲ್ಲಿ ತಂದ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದರು. ಸಂತೆಯಲ್ಲಿ ಪಾಲ್ಗೊಂಡ ಪಾಲಕರು ಶಿಕ್ಷಕರು ಮಕ್ಕಳು ಇಡ್ಲಿ ಸಾಂಬಾರ್ ಭೋಜನ ಸವಿದು ಸಂಭ್ರಮಿಸಿದರು. ಈ ವಿಶೇಷ ಹಳ್ಳಿ ಸಂತೆಯಲ್ಲಿ ಶಾಲೆಯ ಎಸ್ಎಂಸಿ ಅಧ್ಯಕ್ಷರು ಸರ್ವ ಸದಸ್ಯರು ಪಾಲಕರು ಪ್ರಧಾನಗಳು ಸಹ ಶಿಕ್ಷಕರು ಮುದ್ದು ವಿದ್ಯಾರ್ಥಿಗಳು ಅದರಲ್ಲಿ ಪಾಲ್ಗೊಂಡು ಸಂತೆಯನ್ನು ಯಶಸ್ವಿಗೊಳಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group