ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ ವಿತರಿಸಿದ ಶಾಸಕ ಮನಗೂಳಿ

Must Read

ಸಿಂದಗಿ: ಮಾಜಿ ಸಚಿವ ದಿ.ಎಂ ಸಿ ಮನಗೂಳಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ ಹಾಗೂ ಕೂಲಿ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಬಹು ಜನತೆಗೆ ನೆರಳಾಗುವಂತೆ ಮಾಡಿದ್ದಾರೆ ಅವರ ಹೆಸರು ಅಜರಾಮರವಾಗಿ ಉಳಿಸಲು ಎಂ ಸಿ ಮನಗೂಳಿ ಪ್ರತಿಷ್ಠಾನವತಿಯಿಂದ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರಿಗಳಿಗಾಗಿ ಛತ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಸ್ ನಿಲ್ದಾಣ ಹತ್ತಿರ ಬೀದಿ ಬದಿ ವ್ಯಾಪಾರಿಗಳಿಗೆ ಎಂ ಸಿ ಮನಗೂಳಿ ಪ್ರತಿಷ್ಠಾನ ವತಿಯಿಂದ ಛತ್ರಿಗಳನ್ನು ವಿತರಿಸಿ ಮಾತನಾಡಿ, ಬೀದಿ ಬದಿ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳು ನೆರಳಲ್ಲಿ ಕುಳಿತು ವ್ಯಾಪಾರ ಮಾಡಿಕೊಂಡು ಮನಗೂಳಿ ಕುಟುಂಬಕ್ಕೆ ಆಶೀರ್ವಾದ ಮಾಡಿ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ. ಜಯಶ್ರೀ ಹದನೂರ,ಎಂ ಎ ಖತಿಬ, ಸಾಧಿಕ ಸುಂಬಡ, ಮಹಿಬೂಬ ಮರ್ತುರ, ಪ್ರವೀಣ ಕಂಠೀಗೊಂಡ, ರುದ್ರಗೌಡ ಪಾಟೀಲ ಯಂಕಂಚಿ, ಬಸು ಕಾಂಬಳೆ, ಶಾರದಾ ಬೆಟಗೇರಿ, ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಸುನಂದಾ ಭಜಂತ್ರಿ, ಇಬ್ರಾಹಿಂ ನಾಟಿಕಾರ ಸೇರಿದಂತೆ ಅನೇಕರು ಇದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group