ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

Must Read

ಬೆಂಗಳೂರು– ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಕೊಳದ ಮಠದ ಡಾ. ಶಾಂತಿವೀರ ಮಹಾಸ್ವಾಮೀಜಿ ರವರು ದಿವ್ಯ ಸಾನ್ನಿಧ್ಯ ವಹಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜರಗನಹಳ್ಳಿ ಸದಾಶಿವಯ್ಯ ವಹಿಸಲಿದ್ದಾರೆ. ಕನ್ನಡ ಪರ ಹೋರಾಟಗಾರ ಗೋವಿಂದೇಹಳ್ಳಿ ಕೃಷ್ಣೇಗೌಡ, ಸಮಾಜ ಸೇವಕ ಡಾ. ಎಸ್. ಆರ್. ರೇಣುಕಾಪ್ರಸಾದ್, ಸಂಗೀತ ನಿದೇರ್ಶಕ ಬಿ. ಬಲರಾಮ್, ಕಲಾ ಪೋಷಕ ಡಾ. ಜಯಶಂಕರ್ ರೆಡ್ಡಿ ಎನ್.ವಿ. ಹಾಗೂ ಡಾ. ರಾಜೇಶ್ವರಿ ಎನ್ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಡಾ. ವಿ. ಶ್ರೀಕಂಠಸ್ವಾಮಿ ದೀಕ್ಷಿತ್‍ರವರಿಗೆ `ವಿಶ್ವ ಮಾನವ ರತ್ನ ಪ್ರಶಸ್ತಿ’, ಖ್ಯಾತ ಸಂಶೋಧಕ ಹಾಗೂ ಕಾದಂಬರಿಕಾರ ಡಾ. ಕೆ. ರಮಾನಂದರವರಿಗೆ `ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಸಿರಿ’ ಪ್ರಶಸ್ತಿ ಮತ್ತು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ `ರಾಷ್ಟ್ರೀಯ ಯುವ ರತ್ನ’ ಪ್ರಶಸ್ತಿಯನ್ನು ಹಾಗೂ ಇನ್ನಿತರ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರಾದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು ರವರು ತಿಳಿಸಿರುತ್ತಾರೆ.

Latest News

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು

ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...

More Articles Like This

error: Content is protected !!
Join WhatsApp Group